ಜಿಲ್ಲೆಗಳು

ಸಮಸ್ಯೆ ನೋಡಿ ಪರಿಹಾರ ನೀಡಿ : ಕಸದ ತೊಟ್ಟಿಯಾಯ್ತು ಟ್ಯಾಂಕ್ ಆವರಣ

ಬಿದ್ದು ಒದ್ದಾಡುತ್ತಿರುವ ಕಸ ತುಂಬಿರುವ ಪ್ಲಾಸ್ಟಿಕ್ ಕೈಚೀಲ; ಅನೈರ್ಮಲ್ಯದಿಂದ ಕೂಡಿರುವ ಖಾಲಿ ಜಾಗ

ಪ್ರಸಾದ್ ಲಕ್ಕೂರು

ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಬೃಹತ್ ನೀರಿನ ಟ್ಯಾಂಕ್ ಆವರಣ ಕಸದ ತೊಟ್ಟಿಯಾಗಿ ಪರಿವರ್ತಗೊಂಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ.
ಟ್ಯಾಂಕ್ ಸುತ್ತಲೂ ಕಸ ತುಂಬಿದ ಪ್ಲಾಸ್ಟಿಕ್ ಕೈಚೀಲಗಳು ಬಿದ್ದು ಒದ್ದಾಡುತ್ತಿವೆ. ಸಮೀಪವೇ ಮೈಸೂರು ವಿಶ್ವ ವಿದ್ಯಾನಿಲಯದ ಹಾಸ್ಟೆಲ್ ಇದೆ. ಕರಿನಂಜನಪುರ ಬಡಾವಣೆ, ಬುದ್ಧನಗರ, ಹೌಸಿಂಗ್‌ಬೋರ್ಡ್ ಕಾಲೋನಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಿದ್ದು ಓಡಾಡುವ ಜನರು ಕಸವನ್ನು ಎಸೆದು ಹೋಗುತ್ತಿದ್ದಾರೆ.


ನಗರಸಭೆಯ ೧೦ನೇ ವಾರ್ಡ್‌ಗೆ ಸೇರಿದ ಈ ಜಾಗದಲ್ಲಿ ಹಲವು ತಿಂಗಳುಗಳಿಂದ ಕಸದ ರಾಶಿ ರಾರಾಜಿಸುತ್ತಿದೆ. ಸಂಬಂಧಪಟ್ಟ ನಗರಸಭೆ ಅಧಿಕಾರಿಗಳಾಗಲಿ ಅಥವಾ ಈ ವಾರ್ಡ್ ಪ್ರತಿನಿಧಿಸುವ ಸದಸ್ಯರಾಗಲಿ ಇತ್ತ ಗಮನಿಸುತ್ತಿಲ್ಲ ಎಂದು ಸ್ಥಳೀಯರು ಅಸವಾಧಾನ ವ್ಯಕ್ತಪಡಿಸಿದ್ದಾರೆ.
ಬುದ್ಧನಗರ, ಕರಿನಂಜನಪುರ, ಹೌಸಿಂಗ್ ಬೋರ್ಡ್ ಕಾಲೋನಿಗಳಿಗೆ ಕಸ ಸಂಗ್ರಹದ ವಾಹನಗಳು ಆಗಮಿಸಿ ಕಸ ಸಂಗ್ರಹಿಸುತ್ತವೆ. ಈ ವಾಹನ ವಾರಕ್ಕೊಮ್ಮೆ ಬರುವುದು ಅಪರೂಪ. ಆದ್ದರಿಂದ ನಿವಾಸಿಗಳು ಕಸವನ್ನು ಟ್ಯಾಂಕ್ ಬಳಿಯ ಖಾಲಿ ಜಾಗಕ್ಕೆ ಬಿಸಾಡಿ ಹೋಗುತ್ತಾರೆ.
ಮನೆಮನೆಗಳಲ್ಲಿ ಆಟೋ ಮೂಲಕ ಕಸ ಸಂಗ್ರಹಿಸುವುದೇನು ಸರಿ. ಜೊತೆಗೆ ರಸ್ತೆ ಬದಿಗಳು, ಖಾಲಿ ನಿವೇಶನಗಳಲ್ಲಿ ಬಿದ್ದಿರುವ ಕಸ ತೆರವು ವಾಡುವುದು ಯಾವಾಗ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.


ಸಾಂಕ್ರಾಮಿಕ ರೋಗಗಳ ಭೀತಿ
ಮಳೆಗಾಲವಾಗಿದ್ದು ಕಸ ಕೊಳೆತು ಸೊಳ್ಳೆಗಳು ಹೆಚ್ಚುತ್ತಿವೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ, ವೈರಲ್ ಫೀವರ್, ಹಂದಿಜ್ವರದ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.
ಟ್ಯಾಂಕ್ ಸಮೀಪವೇ ಚರಂಡಿಯಿದ್ದು ಕಸವೆಲ್ಲ ತುಂಬಿಕೊಂಡಿದೆ. ಜೊತೆಗೆ ಮಳೆಯ ನೀರು ನಿಂತು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ. ಟ್ಯಾಂಕ್ ಸಮೀಪದ ಜಾಗ ನಗರಸಭೆಗೆ ಸೇರಿದ್ದು ಕಸವನ್ನು ಮತ್ತು ಗಿಡ-ಗಂಟಿಗಳನ್ನು ತೆರವು ವಾಡಿ ಶುಚಿಗೊಳಿಸಿದರೆ ಆಟವಾಡಲು, ವಾುುಂ ವಿಹಾರ ವಾಡಲು ಅನುಕೂಲವಾಗಲಿದೆ. ಈ ಕುರಿತು ೧೦ನೇ ವಾರ್ಡ್ ಸದಸ್ಯರಾದ ಮನೋಜ್‌ಪಟೇಲ್ ಅವರು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.


ಟ್ಯಾಂಕ್ ಆವರಣದಲ್ಲಿ ಕಸ ಬಿದ್ದಿರುವ ಬಗ್ಗೆ ಸದಸ್ಯರಾದ ಮನೋಜ್‌ಪಟೇಲ್ ನಮ್ಮ ಗಮನಕ್ಕೆ ತಂದಿದ್ದಾರೆ. ನಗರಸಭೆಯ ಆರೋಗ್ಯ ನಿರೀಕ್ಷಕರಾದ ಸುಷ್ಮಾ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿ ಸ್ವಚ್ಛತೆಗೆ ಕ್ರಮ ವಹಿಸಲಾಗುವುದು.
ಗಿರಿಜಮ್ಮ, ಪರಿಸರ ಇಂಜಿನಿುಂರ್, ನಗರಸಭೆ. 


ಟ್ಯಾಂಕ್ ಆವರಣ ಶುಚಿಗೊಳಿಸುವಂತೆ ನಗರಸಭೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಸದ್ಯವೇ ಸ್ವಚ್ಛಗೊಳಿಸಲಿದ್ದಾರೆ. ಸ್ಥಳೀಯರು ಕಸವನ್ನು ಟ್ಯಾಂಕ್ ಬಳಿ ಬಿಸಾಡದೆ ಆಟೋಗೆ ನೀಡಬೇಕು. ಇದರಿಂದ ವಾತಾವರಣ ಶುಚಿಯಾಗಿ ಇರಲಿದೆ.
ಮನೋಜ್ ಪಟೇಲ್, ೧೦ನೇ ವಾರ್ಡ್ ಸದಸ್ಯರು.


ಸುಮಾರು ೨-೩ ತಿಂಗಳಿಂದ ಕಸ ಬಿದ್ದಿದೆ. ವಾರಕ್ಕೆ ೨ ಬಾರಿ ಕಸದ ಆಟೋ ಟ್ಯಾಂಕ್ ಆಸುಪಾಸಿನ ಬಡಾವಣೆಗಳಿಗೆ ಬಂದಿದ್ದರೆ ಕಸ ಬೀದಿಗೆ ಬೀಳುತ್ತಿರಲಿಲ್ಲ. ಮನೆಗಳಲ್ಲಿ ಹೆಚ್ಚಿನ ಕಸವನ್ನು ಇಟ್ಟುಕೊಳ್ಳಲಾಗದೆ ಜನರು ಖಾಲಿ ನಿವೇಶನಕ್ಕೆ ಬಿಸಾಡುತ್ತಿದ್ದಾರೆ.

ಕುಮಾರಸ್ವಾಮಿ, ಎಲ್‌ಐಸಿ ಲೇಔಟ್.

andolanait

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

3 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

3 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

3 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

3 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

3 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago