ಜಿಲ್ಲೆಗಳು

ಕುಂದುಕೊರತೆ ನಿವಾರಿಸುವಂತೆ ಜಿ ಟಿ ದೇವೇಗೌಡರಿಗೆ ಮನವಿ

ಮೈಸೂರು: ನೇತಾಜಿ ನಗರ ಬಡಾವಣೆಯ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸುವಂತೆ ಬಡಾವಣೆಯ ನಿವಾಸಿಗಳು ಇಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ಹಲವಾರು ಮನವಿಗಳನ್ನು ಕೊಟ್ಟಿದ್ದರೂ ಸಹ ಬಡಾವಣೆಯ ರಸ್ತೆ, ಚರಂಡಿ ವ್ಯವಸ್ಥೆ, ಬೀದಿ ದೀಪ ಮುಂತಾದ ಮೂಲಭೂತ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ಪರಿಹರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲದಿರುವುದನ್ನು ಬಡಾವಣೆಯ ನಿವಾಸಿಗಳು ಶಾಸಕರ ಗಮನಕ್ಕೆ ತಂದರು.
ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಬಡಾವಣೆಯ ಕೆಲಸಗಳನ್ನು ಪ್ರಾರಂಭಿಸಲು ಶಾಸಕರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ನೇತಾಜಿ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್ ಎಂ ಉಮೇಶ್, ಪರಿಸರ ಬಳಗದ ಸಂಸ್ಥಾಪಕ ಸದಸ್ಯ ಪರಶುರಾಮೇಗೌಡ, ಮತ್ತು ಬಡಾವಣೆಯ ನಿವಾಸಿಗಳಾದ ನರಸಿಂಹ , ರಾಜಗೋಪಾಲ್,ಜವರೇಶ್, ಗಂಟಯ್ಯ,ಆನಂದಮೂರ್ತಿ, ಬಸಪ್ಪ, ನಾಗಪ್ಪ , ಸವಿತಾ , ಜಯಲಕ್ಷ್ಮಿ, ವನಜಾ, ಆಶಾ, ಸತೀಶ್ ಮಹಂತ, ಗಣೇಶ್ ಕಿಣಿ , ಚಂದ್ರಶೇಖರ್,ವಿನೋದಿನಿ, ಸುಜಾತ, ಚಿಕ್ಕತಾಯಮ್ಮ , ಪುಟ್ಟಸ್ವಾಮಿ, ಕುಮಾರ್, ಶಿವರಾಂ, ಮುಂತಾದವರು ಇದ್ದರು.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

12 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

12 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

12 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

13 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

13 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

13 hours ago