ಜಿಲ್ಲೆಗಳು

ಕುಂದುಕೊರತೆ ನಿವಾರಿಸುವಂತೆ ಜಿ ಟಿ ದೇವೇಗೌಡರಿಗೆ ಮನವಿ

ಮೈಸೂರು: ನೇತಾಜಿ ನಗರ ಬಡಾವಣೆಯ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸುವಂತೆ ಬಡಾವಣೆಯ ನಿವಾಸಿಗಳು ಇಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ಹಲವಾರು ಮನವಿಗಳನ್ನು ಕೊಟ್ಟಿದ್ದರೂ ಸಹ ಬಡಾವಣೆಯ ರಸ್ತೆ, ಚರಂಡಿ ವ್ಯವಸ್ಥೆ, ಬೀದಿ ದೀಪ ಮುಂತಾದ ಮೂಲಭೂತ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ಪರಿಹರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲದಿರುವುದನ್ನು ಬಡಾವಣೆಯ ನಿವಾಸಿಗಳು ಶಾಸಕರ ಗಮನಕ್ಕೆ ತಂದರು.
ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಬಡಾವಣೆಯ ಕೆಲಸಗಳನ್ನು ಪ್ರಾರಂಭಿಸಲು ಶಾಸಕರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ನೇತಾಜಿ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್ ಎಂ ಉಮೇಶ್, ಪರಿಸರ ಬಳಗದ ಸಂಸ್ಥಾಪಕ ಸದಸ್ಯ ಪರಶುರಾಮೇಗೌಡ, ಮತ್ತು ಬಡಾವಣೆಯ ನಿವಾಸಿಗಳಾದ ನರಸಿಂಹ , ರಾಜಗೋಪಾಲ್,ಜವರೇಶ್, ಗಂಟಯ್ಯ,ಆನಂದಮೂರ್ತಿ, ಬಸಪ್ಪ, ನಾಗಪ್ಪ , ಸವಿತಾ , ಜಯಲಕ್ಷ್ಮಿ, ವನಜಾ, ಆಶಾ, ಸತೀಶ್ ಮಹಂತ, ಗಣೇಶ್ ಕಿಣಿ , ಚಂದ್ರಶೇಖರ್,ವಿನೋದಿನಿ, ಸುಜಾತ, ಚಿಕ್ಕತಾಯಮ್ಮ , ಪುಟ್ಟಸ್ವಾಮಿ, ಕುಮಾರ್, ಶಿವರಾಂ, ಮುಂತಾದವರು ಇದ್ದರು.

andolanait

Recent Posts

ಆಂದೋಲನದ ವರದಿ ಬಳಿಕ ಎಚ್ಚೆತ್ತ ಜನಪ್ರತಿನಿಧಿಗಳು: ರಸ್ತೆ ಕಾಮಗಾರಿಗೆ ಶಾಸಕ ಜಿಟಿಡಿ ಗುದ್ದಲಿ ಪೂಜೆ

ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ…

13 mins ago

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…

31 mins ago

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…

41 mins ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…

55 mins ago

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

2 hours ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

2 hours ago