ಮೈಸೂರು: ನೇತಾಜಿ ನಗರ ಬಡಾವಣೆಯ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸುವಂತೆ ಬಡಾವಣೆಯ ನಿವಾಸಿಗಳು ಇಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ಹಲವಾರು ಮನವಿಗಳನ್ನು ಕೊಟ್ಟಿದ್ದರೂ ಸಹ ಬಡಾವಣೆಯ ರಸ್ತೆ, ಚರಂಡಿ ವ್ಯವಸ್ಥೆ, ಬೀದಿ ದೀಪ ಮುಂತಾದ ಮೂಲಭೂತ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ಪರಿಹರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲದಿರುವುದನ್ನು ಬಡಾವಣೆಯ ನಿವಾಸಿಗಳು ಶಾಸಕರ ಗಮನಕ್ಕೆ ತಂದರು.
ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಬಡಾವಣೆಯ ಕೆಲಸಗಳನ್ನು ಪ್ರಾರಂಭಿಸಲು ಶಾಸಕರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ನೇತಾಜಿ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್ ಎಂ ಉಮೇಶ್, ಪರಿಸರ ಬಳಗದ ಸಂಸ್ಥಾಪಕ ಸದಸ್ಯ ಪರಶುರಾಮೇಗೌಡ, ಮತ್ತು ಬಡಾವಣೆಯ ನಿವಾಸಿಗಳಾದ ನರಸಿಂಹ , ರಾಜಗೋಪಾಲ್,ಜವರೇಶ್, ಗಂಟಯ್ಯ,ಆನಂದಮೂರ್ತಿ, ಬಸಪ್ಪ, ನಾಗಪ್ಪ , ಸವಿತಾ , ಜಯಲಕ್ಷ್ಮಿ, ವನಜಾ, ಆಶಾ, ಸತೀಶ್ ಮಹಂತ, ಗಣೇಶ್ ಕಿಣಿ , ಚಂದ್ರಶೇಖರ್,ವಿನೋದಿನಿ, ಸುಜಾತ, ಚಿಕ್ಕತಾಯಮ್ಮ , ಪುಟ್ಟಸ್ವಾಮಿ, ಕುಮಾರ್, ಶಿವರಾಂ, ಮುಂತಾದವರು ಇದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…