ಜಿಲ್ಲೆಗಳು

ತಂತ್ರಜ್ಞಾನ-ಸಂಶೋಧನೆ ಬಳಸಿಕೊಂಡು ಉತ್ಪನ್ನದ ಗುಣಮಟ್ಟ ಕಾಪಾಡಿ : ರಾಜ್ಯಪಾಲರ ಕರೆ

ಮೈಸೂರು: ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆಯ ವಾತಾವರಣ ನಿರ್ಮಾಣವಾಗಿದೆ. ತಂತ್ರಜ್ಞಾನವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಬಳಸಿಕೊಂಡು ಉತ್ಪನ್ನದ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ಮೈಸೂರಿನ ಮೇಟಗಳ್ಳಿಯಲ್ಲಿರುವ ವಿಕ್ರಾಂತ್ ಟೈರ್ ಪ್ಲಾಂಟ್ ನಲ್ಲಿ ಆಯೋಜಿಸಲಾಗಿದ್ದ ಜೆಕೆ ಟೈರ್ ವಿಕ್ರಾಂತ್ ರಜತ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕರ್ನಾಟಕ ರಾಜ್ಯ ತನ್ನದೇ ಆದ ಛಾಪು ಮೂಡಿಸಿದೆ. ಕರ್ನಾಟಕ ರಾಜ್ಯವನ್ನು ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಆದ್ಯತೆಯ ತಾಣವನ್ನಾಗಿ ಮಾಡಲು ಸರ್ಕಾರವು ವಿವಿಧ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.

ಜೆಕೆ ಆರ್ಗನೈಸೇಶನ್‌ನ ಪ್ರಮುಖ ಕಂಪನಿಯಾಗಿದ್ದು, ಟೈರ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್ ಭಾರತದಲ್ಲಿನ ಪ್ರಮುಖ ಟೈರ್ ತಯಾರಕರಲ್ಲಿ ಒಂದಾಗಿದೆ ಮತ್ತು ವಿಶ್ವದ ಅಗ್ರ 25 ತಯಾರಕರಲ್ಲಿ ಒಂದಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದು, ಕಳೆದ ನಾಲ್ಕು ದಶಕಗಳಿಂದ, ಜೆಕೆ ಟೈರ್, ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉತ್ಪನ್ನಗಳ ಪರಿಚಯದ ಮೂಲಕ ಟೈರ್ ಉದ್ಯಮದಲ್ಲಿ ನಾವೀನ್ಯತೆ ಮತ್ತು ಉತ್ಕೃಷ್ಟತೆಯನ್ನು ತರುವಲ್ಲಿ ಮುಂಚೂಣಿಯಲ್ಲಿದೆ ಎಂದು ಶ್ಲಾಘಿಸಿದರು.

2019 ರಲ್ಲಿ, ಕಂಪನಿಯು ದೇಶದ ಅತಿದೊಡ್ಡ ಆಫ್-ರೋಡ್ ಟೈರ್ – VEM 045 ನೊಂದಿಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಅನ್ನು ಪ್ರವೇಶಿಸಿತು. ಜೆಕೆ ಟೈರ್ 1997 ರಲ್ಲಿ ಕರ್ನಾಟಕದ ಕೈಗಾರಿಕಾ ರಂಗವನ್ನು ಪ್ರವೇಶಿಸಿತು ಮತ್ತು ಕರ್ನಾಟಕ ಸರ್ಕಾರದ ಅಂಡರ್‌ಟೇಕಿಂಗ್ ವಿಕ್ರಾಂತ್ ಟೈರ್ಸ್ ಲಿಮಿಟೆಡ್‌ನ ನಿರ್ವಹಣಾ ನಿಯಂತ್ರಣಕ್ಕಾಗಿ ಅಂದಿನ ಕರ್ನಾಟಕ ಸರ್ಕಾರದೊಂದಿಗೆ ಕಾರ್ಯತಂತ್ರದ ಮೈತ್ರಿ ಪಾಲುದಾರಿಕೆಯನ್ನು ಪ್ರವೇಶಿಸಿತು. ಅಲ್ಲದೇ, ಜೆಕೆ ಟೈರ್‌ನ ನಿರ್ವಹಣೆಯ ದೃಢವಾದ ಪ್ರಯತ್ನಗಳು ಜೆಕೆ ಟೈರ್ ಮೈಸೂರು ಪ್ಲಾಂಟ್ ಅನ್ನು ವಿಶ್ವ ದರ್ಜೆಯ ಟೈರ್ ಸ್ಥಾವರವನ್ನಾಗಿ ಮಾಡಿದೆ ಎಂದರು.

ಜೆಕೆ ವಿಕ್ರಾಂತ್ ಟೈರ್ ಪ್ಲಾಂಟ್ ತನ್ನ ಹಲವಾರ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಸಂತಸದ ವಿಷಯ. ಮೈಸೂರು ಕೇಂದ್ರ ಕಾರಾಗೃಹದಲ್ಲಿ ವಯಸ್ಕರ ಸಾಕ್ಷರತೆ, ಐಟಿಐ ಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೌಶಲ್ಯ ಅಭಿವೃದ್ಧಿ, ಜೀವನೋಪಾಯ ಬೆಂಬಲ, ಪ್ರಾಥಮಿಕ ಶಾಲೆಗಳ ಅಭಿವೃದ್ಧಿಯ ಮೂಲಭೂತ ಶಿಕ್ಷಣ ಸೇರಿದಂತೆ ಮೂಲಸೌಕರ್ಯ, ಸ್ವಚ್ಛ ಭಾರತ ಅಭಿಯಾನದಡಿ ರಸ್ತೆಗಳ ದತ್ತು, ಕೆರೆಗಳ ಪುನರುಜ್ಜೀವನ, ಹುಣಸೂರು ತಾಲೂಕಿನಲ್ಲಿ ಶೌಚಾಲಯಗಳ ನಿರ್ಮಾಣ ಮತ್ತು ಬಯಲು ಶೌಚ ಮುಕ್ತ ಗ್ರಾಮಗಳನ್ನಾಗಿ ಮಾಡುತ್ತಿರುವ ಕಾರ್ಯ ಪ್ರಶಂಸನೀಯ ಎಂದು ಹೇಳಿದರು.

ಮೈಸೂರು ತಾಂತ್ರಿಕ ಶ್ರೇಷ್ಠತೆಯ ಸ್ಥಳವಾಗಿದೆ. 2016 ರಲ್ಲಿ ಡಾ. ರಘುಪತಿ ಸಿಂಘಾನಿಯಾ ಎಕ್ಸಲೆನ್ಸ್ ಸೆಂಟರ್ ಆಫ್ ಗ್ಲೋಬಲ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಅಂಡ್ ಟೆಕ್ ಸೆಂಟರ್ ಅನ್ನು ಮೈಸೂರಿನಲ್ಲಿ ಸ್ಥಾಪಿಸಲಾಯಿತು, ಇಂದು ಅದು ಮೈಸೂರಿನ ಕೈಗಾರಿಕಾ ವಲಯದಲ್ಲಿ ಒಂದು ಉದಾಹರಣೆಯಾಗಿದೆ ಎಂದು ತಿಳಿದು ಸಂತೋಷವಾಗಿದೆ. ಈ ಕೇಂದ್ರದ ಮೂಲಕ, ರಬ್ಬರ್ ಮತ್ತು ಟೈರ್ ಉದ್ಯಮಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಒದಗಿಸುವುದರೊಂದಿಗೆ ಕೌಶಲ್ಯ ಅಭಿವೃದ್ಧಿ ಮತ್ತು ಸುಸ್ಥಿರತೆಯ ಕ್ಷೇತ್ರದಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್, ಡಾ. ರಘುಪತಿ ಸಿಂಘಾನಿಯಾ ಅವರ ಸಮರ್ಥ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ, ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಮತ್ತು ಸ್ವಾವಲಂಬಿ ಭಾರತ ಅಭಿಯಾನದ ದಿಕ್ಕಿನಲ್ಲಿ ಸಕ್ರಿಯ ಪ್ರಯತ್ನಗಳನ್ನು ಮಾಡುತ್ತಿದೆ. ಈ ಪ್ರಯತ್ನ ಮತ್ತಷ್ಟು ಮುಂದುವರೆಯಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ರಾಜ್ಯಪಾಲರು ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಜೆಕೆ ಟೈರ್ ವಿಕ್ರಾಂತ್ ಪ್ಲಾಂಟ್ ಗೆ ಭೇಟಿ ನೀಡಿ, ವಿವಿಧ ಘಟಕಗಳನ್ನು ಉದ್ಘಾಟಿಸಿ, ತಯಾರಿಕೆ ಘಟಕಗಳನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್. ನಾಗೇಂದ್ರ, ಜೆಕೆ ಟೈರ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್ ನ ಸಿಎಂಡಿ ಡಾ.ರಘುಪತಿ ಸಿಂಘಾನಿಯಾ, ಎಂಡಿ ಅಂಶುಮಾನ್ ಸಿಂಘಾನಿಯಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

andolanait

Recent Posts

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 mins ago

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

24 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

24 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

24 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

24 hours ago