ಜಿಲ್ಲೆಗಳು

ಮೈಸೂರು ವಿವಿ ಹಂಗಾಮಿ ಕುಲಪತಿಗಳಾಗಿ ಪ್ರೊ.ಮುಜಾಫರ್‌ ಎಚ್‌.ಅಸಾದಿ ನೇಮಕ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ.

ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. ಆದರೆ, ಶನಿವಾರ ಮತ್ತು ಭಾನುವಾರ ಸರ್ಕಾರಿ ರಜಾ ದಿನವಾಗಿರುವ ಕಾರಣ ಪ್ರೊ.ಮುಜಾಫರ್ ಅಸ್ಸಾದಿ ಶುಕ್ರವಾರ ಮಧ್ಯಾಹ್ನದ ಬಳಿಕ ಅಧಿಕಾರ ಸ್ವೀಕರಿಸುವಂತೆ ರಾಜ್ಯಪಾಲರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ್‌ಕುಮಾರ್ ಅವರ ಅವಧಿಯು ನ.14ಕ್ಕೆ ಮುಕ್ತಾಯವಾಗಿದ್ದರಿಂದ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಆಗಿದ್ದ ಪ್ರೊ.ಎಚ್.ರಾಜಶೇಖರ್ ಅವರನ್ನು ನೇಮಿಸಲಾಗಿತ್ತು. ನ.15ರಿಂದ ಮೂರು ತಿಂಗಳ ಕಾಲ ಹಂಗಾಮಿ ಕುಲಪತಿಯಾಗಿ ಕೆಲಸ ಮಾಡಿದ್ದ ಅವರ ಡೀನ್ ಅವಧಿಯು ಕೊನೆಗೊಂಡಿದ್ದರಿಂದ ಹಿರಿತನದ ಆಧಾರದ ಮೇಲೆ ರಾಜ್ಯಶಾಸ್ತ್ರ ವಿಭಾಗದ ಪ್ರೊ.ಮುಜಾಫರ್ ಎಚ್.ಅಸ್ಸಾದಿ ಅವರನ್ನು ನೇಮಿಸಲಾಗಿದೆ. ಫೆ.17ರಿಂದ ಮುಂದಿನ ಕಾಯಂ ಕುಲಪತಿ ನೇಮಕವಾಗುವ ಅಥವಾ ಜೂನ್ 30ರವರೆಗೆ ಅಧಿಕಾರಾವಧಿ ಇರುತ್ತದೆ.

ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.

ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

26 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

32 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

41 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago