ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ.
ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. ಆದರೆ, ಶನಿವಾರ ಮತ್ತು ಭಾನುವಾರ ಸರ್ಕಾರಿ ರಜಾ ದಿನವಾಗಿರುವ ಕಾರಣ ಪ್ರೊ.ಮುಜಾಫರ್ ಅಸ್ಸಾದಿ ಶುಕ್ರವಾರ ಮಧ್ಯಾಹ್ನದ ಬಳಿಕ ಅಧಿಕಾರ ಸ್ವೀಕರಿಸುವಂತೆ ರಾಜ್ಯಪಾಲರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ್ಕುಮಾರ್ ಅವರ ಅವಧಿಯು ನ.14ಕ್ಕೆ ಮುಕ್ತಾಯವಾಗಿದ್ದರಿಂದ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಆಗಿದ್ದ ಪ್ರೊ.ಎಚ್.ರಾಜಶೇಖರ್ ಅವರನ್ನು ನೇಮಿಸಲಾಗಿತ್ತು. ನ.15ರಿಂದ ಮೂರು ತಿಂಗಳ ಕಾಲ ಹಂಗಾಮಿ ಕುಲಪತಿಯಾಗಿ ಕೆಲಸ ಮಾಡಿದ್ದ ಅವರ ಡೀನ್ ಅವಧಿಯು ಕೊನೆಗೊಂಡಿದ್ದರಿಂದ ಹಿರಿತನದ ಆಧಾರದ ಮೇಲೆ ರಾಜ್ಯಶಾಸ್ತ್ರ ವಿಭಾಗದ ಪ್ರೊ.ಮುಜಾಫರ್ ಎಚ್.ಅಸ್ಸಾದಿ ಅವರನ್ನು ನೇಮಿಸಲಾಗಿದೆ. ಫೆ.17ರಿಂದ ಮುಂದಿನ ಕಾಯಂ ಕುಲಪತಿ ನೇಮಕವಾಗುವ ಅಥವಾ ಜೂನ್ 30ರವರೆಗೆ ಅಧಿಕಾರಾವಧಿ ಇರುತ್ತದೆ.
ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.
ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…