ಜಿಲ್ಲೆಗಳು

ಮೈಸೂರು ವಿವಿ ಹಂಗಾಮಿ ಕುಲಪತಿಗಳಾಗಿ ಪ್ರೊ.ಮುಜಾಫರ್‌ ಎಚ್‌.ಅಸಾದಿ ನೇಮಕ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ.

ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. ಆದರೆ, ಶನಿವಾರ ಮತ್ತು ಭಾನುವಾರ ಸರ್ಕಾರಿ ರಜಾ ದಿನವಾಗಿರುವ ಕಾರಣ ಪ್ರೊ.ಮುಜಾಫರ್ ಅಸ್ಸಾದಿ ಶುಕ್ರವಾರ ಮಧ್ಯಾಹ್ನದ ಬಳಿಕ ಅಧಿಕಾರ ಸ್ವೀಕರಿಸುವಂತೆ ರಾಜ್ಯಪಾಲರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ್‌ಕುಮಾರ್ ಅವರ ಅವಧಿಯು ನ.14ಕ್ಕೆ ಮುಕ್ತಾಯವಾಗಿದ್ದರಿಂದ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಆಗಿದ್ದ ಪ್ರೊ.ಎಚ್.ರಾಜಶೇಖರ್ ಅವರನ್ನು ನೇಮಿಸಲಾಗಿತ್ತು. ನ.15ರಿಂದ ಮೂರು ತಿಂಗಳ ಕಾಲ ಹಂಗಾಮಿ ಕುಲಪತಿಯಾಗಿ ಕೆಲಸ ಮಾಡಿದ್ದ ಅವರ ಡೀನ್ ಅವಧಿಯು ಕೊನೆಗೊಂಡಿದ್ದರಿಂದ ಹಿರಿತನದ ಆಧಾರದ ಮೇಲೆ ರಾಜ್ಯಶಾಸ್ತ್ರ ವಿಭಾಗದ ಪ್ರೊ.ಮುಜಾಫರ್ ಎಚ್.ಅಸ್ಸಾದಿ ಅವರನ್ನು ನೇಮಿಸಲಾಗಿದೆ. ಫೆ.17ರಿಂದ ಮುಂದಿನ ಕಾಯಂ ಕುಲಪತಿ ನೇಮಕವಾಗುವ ಅಥವಾ ಜೂನ್ 30ರವರೆಗೆ ಅಧಿಕಾರಾವಧಿ ಇರುತ್ತದೆ.

ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.

ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago