ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ.
ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. ಆದರೆ, ಶನಿವಾರ ಮತ್ತು ಭಾನುವಾರ ಸರ್ಕಾರಿ ರಜಾ ದಿನವಾಗಿರುವ ಕಾರಣ ಪ್ರೊ.ಮುಜಾಫರ್ ಅಸ್ಸಾದಿ ಶುಕ್ರವಾರ ಮಧ್ಯಾಹ್ನದ ಬಳಿಕ ಅಧಿಕಾರ ಸ್ವೀಕರಿಸುವಂತೆ ರಾಜ್ಯಪಾಲರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ್ಕುಮಾರ್ ಅವರ ಅವಧಿಯು ನ.14ಕ್ಕೆ ಮುಕ್ತಾಯವಾಗಿದ್ದರಿಂದ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಆಗಿದ್ದ ಪ್ರೊ.ಎಚ್.ರಾಜಶೇಖರ್ ಅವರನ್ನು ನೇಮಿಸಲಾಗಿತ್ತು. ನ.15ರಿಂದ ಮೂರು ತಿಂಗಳ ಕಾಲ ಹಂಗಾಮಿ ಕುಲಪತಿಯಾಗಿ ಕೆಲಸ ಮಾಡಿದ್ದ ಅವರ ಡೀನ್ ಅವಧಿಯು ಕೊನೆಗೊಂಡಿದ್ದರಿಂದ ಹಿರಿತನದ ಆಧಾರದ ಮೇಲೆ ರಾಜ್ಯಶಾಸ್ತ್ರ ವಿಭಾಗದ ಪ್ರೊ.ಮುಜಾಫರ್ ಎಚ್.ಅಸ್ಸಾದಿ ಅವರನ್ನು ನೇಮಿಸಲಾಗಿದೆ. ಫೆ.17ರಿಂದ ಮುಂದಿನ ಕಾಯಂ ಕುಲಪತಿ ನೇಮಕವಾಗುವ ಅಥವಾ ಜೂನ್ 30ರವರೆಗೆ ಅಧಿಕಾರಾವಧಿ ಇರುತ್ತದೆ.
ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.
ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…