ಮೈಸೂರು : ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ಮ-ನರೇಗಾ ಯೋಜನೆಯಡಿಯಲ್ಲಿ ಕಡಿಮೆ ಮಾನವ ದಿನಗಳನ್ನು ಸಾಧಿಸಿರುವ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಮಾನವ ದಿನಗಳನ್ನು ಸಾಧಿಸಲು ಸೂಚನೆ ನೀಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಪ್ರಗತಿ, ಶಿಶುಪಾಲನಾ ಕೇಂದ್ರ ಪ್ರಗತಿ, ಎನ್ ಎಮ್ ಎಮ್ ಎಸ್ ಪ್ರಗತಿ, ಸಾಮಾಜಿಕ ಪರಿಶೋಧನೆ ಪ್ರಗತಿ, ಸ್ವ ಸಹಾಯ ಸಂಘಗಳ ವರ್ಕ್ ಶೆಡ್, ಹಾಗೂ ಸ್ವಚ್ಛ ಭಾರತ್ ಅಭಿಯಾನ, ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ ಕುರಿತು ಚರ್ಚಿಸಿದರು.
ಜಲಜೀವನ್ ಮಿಷನ್ ಕುಡಿಯುವ ನೀರು ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ತುರ್ತು ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು.
ಪಿಆರ್ ಇಡಿ ಪ್ರಗತಿ, ತೆರಿಗೆ ಪರಿಷ್ಕರಣೆ, ತೆರಿಗೆ ವಸೂಲಾತಿ, ಡಿಜಿಟಲ್ ಗ್ರಂಥಾಲಯ, ಸಕಾಲ ಯೋಜನೆ, ಸರ್ಕಾರಿ ಸಿಬ್ಬಂಧಿ, ಗ್ರಾ.ಪಂ ಇ-ಹಾಜರಾತಿ ಪ್ರಗತಿ, ಆಸ್ತಿ ಸಮೀಕ್ಷೆ ಹಾಗೂ 14 ಮತ್ತು 15ನೇ ಹಣಕಾಸಿನ ಪ್ರಗತಿ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಉಪಕಾರ್ಯದರ್ಶಿ(ಆಡಳಿತ) ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದ
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…