ಜಿಲ್ಲೆಗಳು

ನಿಷ್ಠೆಯಿಂದ ಮಾಡಿದ ಕಾಯಕ ಫಲ ಕೊಟ್ಟೇ ಕೊಡುತ್ತದೆ : ಜಿಲ್ಲಾಧಿಕಾರಿ ರಮೇಶ್

ಹನೂರು: ಯಾವುದೇ ಕಾಯಕವನ್ನು‌ ನಿಷ್ಠೆಯಿಂದ ಮಾಡಿದರೆ ಮುಂದೊಂದ ದಿನ ಅದು ಒಳ್ಳೆಯ ಫಲ ಕೊಟ್ಟೇ ಕೊಡುತ್ತದೆ. ಈ‌ ನಿಟ್ಟಿನಲ್ಲಿ ನೌಕರರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ರಮೇಶ್ ತಿಳಿಸಿದರು.

ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ಮೂರನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು
ರಾಜ್ಯ ಹಾಗೂ ಹೊರರಾಜ್ಯಗಳಿಂದ ಪ್ರತಿ ನಿತ್ಯ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಕೆಲಸ ಅತ್ಯಂತ ಪೂಜ್ಯನೀಯವಾದದು. ಇಂದು ಮಾಡುತ್ತಿರುವ ಕಾರ್ಮಿಕರ ಸೇವೆ ಮುಂದೊಂದು ದಿನ ಫಲ ಕೊಡಲಿದೆ. ಆದ್ದರಿಂದ ಪ್ರತಿಯೊಬ್ಬ ಕಾರ್ಮಿಕರು ತಮ್ಮ ಕಾಯಕವನ್ನು ಪ್ರಾಮಾಣಿಕವಾಗಿ‌ ಮಾಡಬೇಕು ಎಂದು ತಿಳಿಸಿದರು.
ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ಕಾರ್ಮಿಕರು ಸಂಘಟನೆ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದರ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು. ದಕ್ಷಿಣ ಭಾಗದಲ್ಲಿ ನೆಲೆಸಿರುವ ಮಹದೇಶ್ವರರ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಭಕ್ತರ ಸೇವೆ ಮಾಡುವುದರ ಮೂಲಕ ಮಾದರಿಯಾಗಬೇಕು. ಮಾಡುವಕಾಯಕವನ್ನು ಭಕ್ತಿಪೂರ್ವಕವಾಗಿ ಮಾಡಿದರೆ ಅದು ಮಹದೇಶ್ವರರ ಸೇವೆ ಮಾಡಿದಂತೆಯೇ ಇದನ್ನು ಪ್ರತಿಯೊಬ್ಬ ನೌಕರರು ಅಳವಡಿಸಕೊಳ್ಳುವ ಮೂಲಕ ಕಾರ್ಯಶ್ರದ್ಧೆ ಮೆರೆಯಬೇಕು ಎಂದು ತಿಳಿಸಿದರು.
ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಮಾತನಾಡಿ, ನಿಮ್ಮಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನೆಲ್ಲಾ ಬದಿಗೊತ್ತಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿರುವುದು ಸಂತಸದ ವಿಚಾರ. ಕಾರ್ಮಿಕರ ಬೇಡಿಕಗಳು ಏನೇ ಇದ್ದರೂ ಅದನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ನೌಕರರ ಸಂಘಕ್ಕೆ ಕಚೆರಿ ತೆರೆಯಲು ಮುಂದಿನ ದಿನಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೆ ನಿಮ್ಮ ಸಿಗುವಂತಾಗಲಿ ಎಂದು ತಿಳಿಸಿದರು.
ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ಅಧ್ಯಕ್ಷ ಮಹದೇವಪ್ರಸಾದ್, ಗ್ರಾ.ಪಂ ಅಧ್ಯಕ್ಷ ಕುಮಾರ್, ಬೇಡಗಂಪಣ ಸಂಘದ ಅಧ್ಯಕ್ಷ ಪುಟ್ಟಣ್ಣ, ತಹಶೀಲ್ದಾರ್ ಆನಂದಯ್ಯ,ಲೆಕ್ಕಾಧೀಕ್ಷಕ ಪ್ರವೀಣ್ ಪಟೇಲ್ ,ಗೌರವಾಧ್ಯಕ್ಷ ಕೆ ಮಹಾದೇವಸ್ವಾಮಿ, ಮುಖ್ಯ ಭಾಷಣಕಾರ ಕಿರಣ್ ರಾಜ್, ಕಾನೂನು ಸಲಹೆಗಾರ ಪ್ರಮೋದ್ , ಪ್ರಧಾನ ಕಾರ್ಯದರ್ಶಿ ವಿ ಮಹದೇವಸ್ವಾಮಿ, ಉಪಾಧ್ಯಕ್ಷ ಪಿ ಮಹದೇವಸ್ವಾಮಿ, ಕೃಷ್ಣಮೂರ್ತಿ ,ಕಾರ್ಯದರ್ಶಿ ರಾಜು, ಸಂಘಟನಾ ಕಾರ್ಯದರ್ಶಿ ಚಿನ್ನಸ್ವಾಮಿ ಖಜಾಂಚಿ ರಾಜಶೇಖರ್ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

3 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

3 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

4 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

5 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

5 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

5 hours ago