ಜಿಲ್ಲೆಗಳು

ಅಸ್ತಿ ತೆರಿಗೆ : ಗುರಿ ಸಾಧನೆಯತ್ತ ಪಾಲಿಕೆ ದಾಪುಗಾಲು

10 ತಿಂಗಳ ಅವಧಿುಂಲ್ಲಿ 150 ಕೋಟಿ ರೂ. ತೆರಿಗೆ ಸಂಗ್ರಹಿಸಿದ ನಗರಪಾಲಿಕೆ

ದಿನೇಶ್ ಕುಮಾರ್

ಮೈಸೂರು: ತೆರಿಗೆದಾರರಲ್ಲಿ ಜಾಗೃತಿ, ರಿಯಾಯಿತಿ, ಜಾಹೀರಾತು ಹಾಗೂ ಇನ್ನಿತರೆ ಕಾರ್ಯಕ್ರಮಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಮುಂದಾದ ನಗರಪಾಲಿಕೆ ಅದರಲ್ಲಿ ಯಶಸ್ಸು ಕಂಡಿದ್ದು, ಕಳೆದ 10 ತಿಂಗಳ ಅವಧಿಯಲ್ಲಿ ಬರೋಬ್ಬರಿ 150 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ.
ಈ ಹಿಂದೆ ತೆರಿಗೆ ಸಂಗ್ರಹ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ಕೂಗಿತ್ತು. ಆದರೆ, ನಗರಪಾಲಿಕೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ತೆರಿಗೆ ಸಂಗ್ರಹ ಹೆಚ್ಚಳವಾಗಿದೆ.
2021-22ನೇ ಹಣಕಾಸು ವರ್ಷದ ಅಂತ್ಯಕ್ಕೆ ಇನ್ನೂ ಎರಡೂವರೆ ತಿಂಗಳು ಬಾಕಿ ಇರುವಾಗಲೇ ನಗರಪಾಲಿಕೆ ಅಧಿಕಾರಿಗಳು ಸಾಕಷ್ಟು ಕಸರತ್ತು ನಡೆಸಿ ಹೆಚ್ಚಿನ ತೆರಿಗೆ ಸಂಗ್ರಹಿಸಿ ದಾಖಲೆ ನಿರ್ಮಿಸಿದ್ದಾರೆ. ಕಳೆದ ಹತ್ತು ವರ್ಷಗಳ ಅಂಕಿ, ಅಂಶ ಗಮನಿಸಿದಲ್ಲಿ ಇಷ್ಟು ಮೊತ್ತದ ತೆರಿಗೆ ವಸೂಲಾದ ಉದಾಹರಣೆಯೇ ಇಲ್ಲ.
ಹಣಕಾಸು ವರ್ಷಾರಂಭವಾದ ಏಪ್ರಿಲ್ ತಿಂಗಳಿನಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ನಗರಪಾಲಿಕೆ ವತಿಯಿಂದ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಈ ಅವಕಾಶವನ್ನು ನಾಗರಿಕರು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದು, ವರ್ಷದಿಂದ ವರ್ಷಕ್ಕೆ ಈ ಪ್ರಮಾಣ ಹೆಚ್ಚುತ್ತಲಿದೆ. ಅದರಂತೆ ಈ ಬಾರಿಯೂ ರಿಯಾಯಿತಿ ಪ್ರಕಟಿಸಲಾಗಿತ್ತು.
ಅಲ್ಲದೆ, ಮಾಧ್ಯಮಗಳ ಮೂಲಕ ಕೂಡ ರಿಯಾಯಿತಿ ಸಂಬಂಧ ಪ್ರಕಟಣೆ ಹೊರಡಿಸಲಾಗಿತ್ತು. ಜೊತೆಗೆ ಈ ವರ್ಷ ಏಪ್ರಿಲ್ ತಿಂಗಳ ಅವಧಿಯಲ್ಲಿ 60 ಕೋಟಿ ರೂ.ಗಳ ಸಂಗ್ರಹದ ಗುರಿ ಹೊಂದಲಾಗಿತ್ತು. ಅದರಂತೆ ರಜಾ ದಿನಗಳನ್ನು ಹೊರತುಪಡಿಸಿ ಏಪ್ರಿಲ್ ತಿಂಗಳಿನಲ್ಲಿ 60 ಕೋಟಿ ರೂ.ಗೂ ಹೆಚ್ಚಿನ ತೆರಿಗೆ ವಸೂಲಾಗಿತ್ತು.
ನಂತರದ ದಿನಗಳಲ್ಲಿ ಶೇ.15ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಿದ್ದ ಕಾರಣಕ್ಕಾಗಿ ದಂಡ ರಹಿತ ತೆರಿಗೆ ಪಾವತಿಸಲು ಒಂದು ತಿಂಗಳು ಮುಂದುವರಿಸಲಾಗಿತ್ತು. ಇದೀಗ ಶೇ.2ರ ದಂಡ ರಹಿತವಾಗಿ ಜೂನ್ ತಿಂಗಳಿನಲ್ಲಿಯೂ ತೆರಿಗೆ ಪಾವತಿಸಲು ನಗರಪಾಲಿಕೆ ಅವಕಾಶ ಮಾಡಿಕೊಟ್ಟಿತ್ತು. ಇದರಿಂದಾಗಿ ಗುರಿಗಿಂತ ಹೆಚ್ಚು ತೆರಿಗೆ ಸಂಗ್ರಹವಾಗಿದೆ.

ತೆರಿಗೆ ಸಂಗ್ರಹ ಕೇಂದ್ರಗಳ ಹೆಚ್ಚಳ: ತೆರಿಗೆ ರಿಯಾಯಿತಿ ಇದ್ದ ಹಿನ್ನೆಲೆುಂಲ್ಲಿ ನಗರದ 9 ವಲಯ ಕಚೇರಿಗಳಲ್ಲಿ ತೆರಿಗೆ ಸಂಗ್ರಹಕ್ಕೆ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಇದರ ಜತೆಗೆ ವಲಯ ಕಚೇರಿ ಆವರಣಗಳಲ್ಲಿ ಶಾಮಿಯಾನ ಹಾಗೂ ಕುರ್ಚಿಗಳನ್ನು ಹಾಕುವ ಮೂಲಕ ತೆರಿಗೆ ಪಾವತಿಸಲು ಬರುವ ಹಿರಿಯ ನಾಗರೀಕರಿಗೆ ಾಂವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿತ್ತು.
ಈ ಎಲ್ಲಾ ಅಂಶಗಳ ಹಿನ್ನೆಲೆುಂಲ್ಲಿ ಆಸ್ತಿ ತೆರಿಗೆ ವಸೂಲಾತಿಯಲ್ಲಿ ಅಧಿಕಾರಿಗಳು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಸಾಧನೆಯಾಗಿದೆ. ಕಳೆದ ಬಾರಿ ಈ ವೇಳೆಗೆ 120 ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು. ಈ ಬಾರಿ 165 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ಹೊಂದಲಾಗಿದ್ದು, ಗುರಿ ತಲುಪಲು ಇನ್ನೂ ಮೂರು ತಿಂಗಳು ಕಾಲಾವಕಾಶವಿದೆ.

 


ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಜನರು ರಿಯಾಯಿತಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ 165 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಇದೆ. ಗುರಿಯನ್ನು ದಾಟಿ 175 ಕೋಟಿ ರೂ ತೆರಿಗೆ ಸಂಗ್ರಹವಾಗುವ ಸಾಧ್ಯತೆ ಇದೆ.
-ಲಕ್ಷ್ಮೀ ಕಾಂತರೆಡ್ಡಿ, ನಗರಪಾಲಿಕೆ
ಆಯುಕ್ತರು.

 

andolanait

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

7 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

7 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

9 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

9 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

10 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

11 hours ago