ಜಿಲ್ಲೆಗಳು

ವಸತಿ ಘಟಕ ವೆಚ್ಚ 3, 4 ಲಕ್ಷಕ್ಕೆ ಹೆಚ್ಚಿಸಲು ಪ್ರಸ್ತಾವ : ಸಚಿವ ಸೋಮಣ್ಣ

ಸಿ.ಎಂ.ರಿಂದ ಸಕಾರಾತ್ಮಕ ಸ್ಪಂದನೆ  ಎಂದ ಸಚಿವ ಸೋಮಣ್ಣ

ಚಾಮರಾಜನಗರ: ವಸತಿ ನಿರ್ಮಾಣ ಮೊತ್ತವನ್ನು ನಗರ ಪ್ರದೇಶದಲ್ಲಿ 4 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷಕ್ಕೆ ಏರಿಸುವ ಸಂಬಂಧ ಮುಖ್ಯಮಂತ್ರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ನಡೆದ ವಸತಿ ಯೋಜನೆಗಳ ಕುರಿತು ಸಭೆಯಲ್ಲಿ ಮಾತನಾಡಿದರು.
2013ರಲ್ಲಿ ಮನೆ ನಿರ್ಮಾಣದ ಘಟಕ ವೆಚ್ಚ 40 ಸಾವಿರ ರೂ.ಗಳಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 80 ಸಾವಿರ ರೂ.ಆಗಿತ್ತು. ಜಗದೀಶ್ ಶೆಟ್ಟರ್ ಸಿ.ಎಂ.ಆಗಿದ್ಧಾಗ 1.20 ಲಕ್ಷಕ್ಕೆ ಏರಿಸಲಾಯಿತು. ಅದನ್ನು ಈಗ ಹೆಚ್ಚಿಸುವ ಪ್ರಸ್ತಾವವನ್ನು ಸಿ.ಎಂ.ಬಸವರಾಜ ಬೊಮ್ಮಾಯಿ ಅವರ ಮುಂದೆ ಇಟ್ಟಿರುವುದಾಗಿ ಹೇಳಿದರು.
ಜಾತಿ, ಪಕ್ಷ ನೋಡದೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಅರ್ಹ ವಸತಿ ರಹಿತರನ್ನು ಆಯ್ಕೆ ಮಾಡುವಂತೆ ತಿಳಿಸಿದ ಸಚಿವರು, ಆಯಾಯ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಸಿ ಆದಷ್ಟು ಬೇಗ ಮನೆ ನಿರ್ಮಾಣ ಆದೇಶ ಪತ್ರ ನೀಡುವುದಾಗಿ ತಿಳಿಸಿದರು.
ತಹಸೀಲ್ದಾರ್, ತಾಪಂ ಇಒ, ಆರ್ ಐ, ಪಂಚಾಯತ್ ಅಧ್ಯಕ್ಷರು ಒಟ್ಟಿಗೆ ಕುಳಿತು ಅರ್ಹ ಫಲಾಣುಭವಿಗಳ ಪಟ್ಟಿ ತಯಾರಿಸಬೇಕು. ವಿಸಿಲ್ ಆಪ್ ಅನರ್ಹರ ತಡೆ ಬಂದೋಬಸ್ತ್ ಮಾಡುತ್ತಿದೆ ಎಂದು ಹೇಳಿದರು.
ಎಲ್ಲೆಲ್ಲಿ ನಿವೇಶನ ಜಾಗ ಗುರುತಿಸಬಹುದು, ನಿವೇಶನಗಳನು ಹಂಚಿಕೆ ಮಾಡಬಹುದು ಎಂಬುದರ ಬಗ್ಗೆ ಉಪ ವಿಭಾಗಾಧಿಕಾರಿ, ತಹಸೀಲ್ಧಾರ್ ಹಾಗೂ ತಾಪಂ ಇಒಗಳು ಇನ್ನು 15 ದಿನಗಳೊಳಗೆ ತಮ್ಮ ಕರ್ತವ್ಯ ಪೂರೈಸಬೇಕು ಎಂದರು.
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಹಕ್ಕು ಪತ್ರ ನೀಡುವಾಗ ಗೊಂದಲ ಉಂಟಾದದ್ದು ಎಲ್ಲರಿಗೂ ಗೊತ್ತಿದೆ. ಅಲ್ಲಿ ನಿಜವಾದ ಬಡವರು ಯಾರಿದ್ದಾರೆ ಅವರಿಗೆ ವಾರದಲ್ಲಿ ಹಕ್ಕು ಪತ್ರ ನೀಡಬೇಕು. ಇದಕ್ಕೆ ಬೇಕಾದ ಅನುದಾನ ನೀಡುವುದಾಗಿ ಹೇಳಿದರು.
ಶಾಸಕ ಆರ್.ನರೇಂದ್ರ ಅವರು ಮಾತನಾಡಿ, ಗ್ರಾಪಂಗಳಲ್ಲಿ ಇ-ಸ್ವತ್ತನ್ನು ಕೆಲವರಿಗೆ ನೀಡುವುದು, ಇನ್ನು ಹಲವರಿಗೆ ನೀಡದಿರುವುದು ನಡೆಯುತ್ತಿದ್ದು ಇದು ದೊಡ್ಡ ಸಮಸ್ಯೆಯಾಗಿದೆ. ಏಕೆ ಹೀಗೆ ಆಗುತ್ತಿದೆ ಎಂಬುದರ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಪರಿಹರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿಪಂ ಸಿಇಒ ಗಾಯತ್ರಿ, ಎಸ್ಪಿ ಶಿವಕುಮಾರ್, ಎಡಿಸಿ ಕಾತ್ಯಾಯಿನಿ ದೇವಿ, ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕಿ ದೀಪ ಜೆ.ಕಂಟ್ರಾಕ್ಟರ್‌, ಅಧಿಕಾರಿಗಳು ಹಾಜರಿದ್ದರು.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

2 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

4 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

4 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

4 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

4 hours ago