ಜಿಲ್ಲೆಗಳು

ವಸತಿ ಘಟಕ ವೆಚ್ಚ 3, 4 ಲಕ್ಷಕ್ಕೆ ಹೆಚ್ಚಿಸಲು ಪ್ರಸ್ತಾವ : ಸಚಿವ ಸೋಮಣ್ಣ

ಸಿ.ಎಂ.ರಿಂದ ಸಕಾರಾತ್ಮಕ ಸ್ಪಂದನೆ  ಎಂದ ಸಚಿವ ಸೋಮಣ್ಣ

ಚಾಮರಾಜನಗರ: ವಸತಿ ನಿರ್ಮಾಣ ಮೊತ್ತವನ್ನು ನಗರ ಪ್ರದೇಶದಲ್ಲಿ 4 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷಕ್ಕೆ ಏರಿಸುವ ಸಂಬಂಧ ಮುಖ್ಯಮಂತ್ರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ನಡೆದ ವಸತಿ ಯೋಜನೆಗಳ ಕುರಿತು ಸಭೆಯಲ್ಲಿ ಮಾತನಾಡಿದರು.
2013ರಲ್ಲಿ ಮನೆ ನಿರ್ಮಾಣದ ಘಟಕ ವೆಚ್ಚ 40 ಸಾವಿರ ರೂ.ಗಳಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 80 ಸಾವಿರ ರೂ.ಆಗಿತ್ತು. ಜಗದೀಶ್ ಶೆಟ್ಟರ್ ಸಿ.ಎಂ.ಆಗಿದ್ಧಾಗ 1.20 ಲಕ್ಷಕ್ಕೆ ಏರಿಸಲಾಯಿತು. ಅದನ್ನು ಈಗ ಹೆಚ್ಚಿಸುವ ಪ್ರಸ್ತಾವವನ್ನು ಸಿ.ಎಂ.ಬಸವರಾಜ ಬೊಮ್ಮಾಯಿ ಅವರ ಮುಂದೆ ಇಟ್ಟಿರುವುದಾಗಿ ಹೇಳಿದರು.
ಜಾತಿ, ಪಕ್ಷ ನೋಡದೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಅರ್ಹ ವಸತಿ ರಹಿತರನ್ನು ಆಯ್ಕೆ ಮಾಡುವಂತೆ ತಿಳಿಸಿದ ಸಚಿವರು, ಆಯಾಯ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಸಿ ಆದಷ್ಟು ಬೇಗ ಮನೆ ನಿರ್ಮಾಣ ಆದೇಶ ಪತ್ರ ನೀಡುವುದಾಗಿ ತಿಳಿಸಿದರು.
ತಹಸೀಲ್ದಾರ್, ತಾಪಂ ಇಒ, ಆರ್ ಐ, ಪಂಚಾಯತ್ ಅಧ್ಯಕ್ಷರು ಒಟ್ಟಿಗೆ ಕುಳಿತು ಅರ್ಹ ಫಲಾಣುಭವಿಗಳ ಪಟ್ಟಿ ತಯಾರಿಸಬೇಕು. ವಿಸಿಲ್ ಆಪ್ ಅನರ್ಹರ ತಡೆ ಬಂದೋಬಸ್ತ್ ಮಾಡುತ್ತಿದೆ ಎಂದು ಹೇಳಿದರು.
ಎಲ್ಲೆಲ್ಲಿ ನಿವೇಶನ ಜಾಗ ಗುರುತಿಸಬಹುದು, ನಿವೇಶನಗಳನು ಹಂಚಿಕೆ ಮಾಡಬಹುದು ಎಂಬುದರ ಬಗ್ಗೆ ಉಪ ವಿಭಾಗಾಧಿಕಾರಿ, ತಹಸೀಲ್ಧಾರ್ ಹಾಗೂ ತಾಪಂ ಇಒಗಳು ಇನ್ನು 15 ದಿನಗಳೊಳಗೆ ತಮ್ಮ ಕರ್ತವ್ಯ ಪೂರೈಸಬೇಕು ಎಂದರು.
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಹಕ್ಕು ಪತ್ರ ನೀಡುವಾಗ ಗೊಂದಲ ಉಂಟಾದದ್ದು ಎಲ್ಲರಿಗೂ ಗೊತ್ತಿದೆ. ಅಲ್ಲಿ ನಿಜವಾದ ಬಡವರು ಯಾರಿದ್ದಾರೆ ಅವರಿಗೆ ವಾರದಲ್ಲಿ ಹಕ್ಕು ಪತ್ರ ನೀಡಬೇಕು. ಇದಕ್ಕೆ ಬೇಕಾದ ಅನುದಾನ ನೀಡುವುದಾಗಿ ಹೇಳಿದರು.
ಶಾಸಕ ಆರ್.ನರೇಂದ್ರ ಅವರು ಮಾತನಾಡಿ, ಗ್ರಾಪಂಗಳಲ್ಲಿ ಇ-ಸ್ವತ್ತನ್ನು ಕೆಲವರಿಗೆ ನೀಡುವುದು, ಇನ್ನು ಹಲವರಿಗೆ ನೀಡದಿರುವುದು ನಡೆಯುತ್ತಿದ್ದು ಇದು ದೊಡ್ಡ ಸಮಸ್ಯೆಯಾಗಿದೆ. ಏಕೆ ಹೀಗೆ ಆಗುತ್ತಿದೆ ಎಂಬುದರ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಪರಿಹರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿಪಂ ಸಿಇಒ ಗಾಯತ್ರಿ, ಎಸ್ಪಿ ಶಿವಕುಮಾರ್, ಎಡಿಸಿ ಕಾತ್ಯಾಯಿನಿ ದೇವಿ, ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕಿ ದೀಪ ಜೆ.ಕಂಟ್ರಾಕ್ಟರ್‌, ಅಧಿಕಾರಿಗಳು ಹಾಜರಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago