ಜಿಲ್ಲೆಗಳು

ವಸತಿ ಘಟಕ ವೆಚ್ಚ 3, 4 ಲಕ್ಷಕ್ಕೆ ಹೆಚ್ಚಿಸಲು ಪ್ರಸ್ತಾವ : ಸಚಿವ ಸೋಮಣ್ಣ

ಸಿ.ಎಂ.ರಿಂದ ಸಕಾರಾತ್ಮಕ ಸ್ಪಂದನೆ  ಎಂದ ಸಚಿವ ಸೋಮಣ್ಣ

ಚಾಮರಾಜನಗರ: ವಸತಿ ನಿರ್ಮಾಣ ಮೊತ್ತವನ್ನು ನಗರ ಪ್ರದೇಶದಲ್ಲಿ 4 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷಕ್ಕೆ ಏರಿಸುವ ಸಂಬಂಧ ಮುಖ್ಯಮಂತ್ರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ನಡೆದ ವಸತಿ ಯೋಜನೆಗಳ ಕುರಿತು ಸಭೆಯಲ್ಲಿ ಮಾತನಾಡಿದರು.
2013ರಲ್ಲಿ ಮನೆ ನಿರ್ಮಾಣದ ಘಟಕ ವೆಚ್ಚ 40 ಸಾವಿರ ರೂ.ಗಳಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 80 ಸಾವಿರ ರೂ.ಆಗಿತ್ತು. ಜಗದೀಶ್ ಶೆಟ್ಟರ್ ಸಿ.ಎಂ.ಆಗಿದ್ಧಾಗ 1.20 ಲಕ್ಷಕ್ಕೆ ಏರಿಸಲಾಯಿತು. ಅದನ್ನು ಈಗ ಹೆಚ್ಚಿಸುವ ಪ್ರಸ್ತಾವವನ್ನು ಸಿ.ಎಂ.ಬಸವರಾಜ ಬೊಮ್ಮಾಯಿ ಅವರ ಮುಂದೆ ಇಟ್ಟಿರುವುದಾಗಿ ಹೇಳಿದರು.
ಜಾತಿ, ಪಕ್ಷ ನೋಡದೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಅರ್ಹ ವಸತಿ ರಹಿತರನ್ನು ಆಯ್ಕೆ ಮಾಡುವಂತೆ ತಿಳಿಸಿದ ಸಚಿವರು, ಆಯಾಯ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಸಿ ಆದಷ್ಟು ಬೇಗ ಮನೆ ನಿರ್ಮಾಣ ಆದೇಶ ಪತ್ರ ನೀಡುವುದಾಗಿ ತಿಳಿಸಿದರು.
ತಹಸೀಲ್ದಾರ್, ತಾಪಂ ಇಒ, ಆರ್ ಐ, ಪಂಚಾಯತ್ ಅಧ್ಯಕ್ಷರು ಒಟ್ಟಿಗೆ ಕುಳಿತು ಅರ್ಹ ಫಲಾಣುಭವಿಗಳ ಪಟ್ಟಿ ತಯಾರಿಸಬೇಕು. ವಿಸಿಲ್ ಆಪ್ ಅನರ್ಹರ ತಡೆ ಬಂದೋಬಸ್ತ್ ಮಾಡುತ್ತಿದೆ ಎಂದು ಹೇಳಿದರು.
ಎಲ್ಲೆಲ್ಲಿ ನಿವೇಶನ ಜಾಗ ಗುರುತಿಸಬಹುದು, ನಿವೇಶನಗಳನು ಹಂಚಿಕೆ ಮಾಡಬಹುದು ಎಂಬುದರ ಬಗ್ಗೆ ಉಪ ವಿಭಾಗಾಧಿಕಾರಿ, ತಹಸೀಲ್ಧಾರ್ ಹಾಗೂ ತಾಪಂ ಇಒಗಳು ಇನ್ನು 15 ದಿನಗಳೊಳಗೆ ತಮ್ಮ ಕರ್ತವ್ಯ ಪೂರೈಸಬೇಕು ಎಂದರು.
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಹಕ್ಕು ಪತ್ರ ನೀಡುವಾಗ ಗೊಂದಲ ಉಂಟಾದದ್ದು ಎಲ್ಲರಿಗೂ ಗೊತ್ತಿದೆ. ಅಲ್ಲಿ ನಿಜವಾದ ಬಡವರು ಯಾರಿದ್ದಾರೆ ಅವರಿಗೆ ವಾರದಲ್ಲಿ ಹಕ್ಕು ಪತ್ರ ನೀಡಬೇಕು. ಇದಕ್ಕೆ ಬೇಕಾದ ಅನುದಾನ ನೀಡುವುದಾಗಿ ಹೇಳಿದರು.
ಶಾಸಕ ಆರ್.ನರೇಂದ್ರ ಅವರು ಮಾತನಾಡಿ, ಗ್ರಾಪಂಗಳಲ್ಲಿ ಇ-ಸ್ವತ್ತನ್ನು ಕೆಲವರಿಗೆ ನೀಡುವುದು, ಇನ್ನು ಹಲವರಿಗೆ ನೀಡದಿರುವುದು ನಡೆಯುತ್ತಿದ್ದು ಇದು ದೊಡ್ಡ ಸಮಸ್ಯೆಯಾಗಿದೆ. ಏಕೆ ಹೀಗೆ ಆಗುತ್ತಿದೆ ಎಂಬುದರ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಪರಿಹರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿಪಂ ಸಿಇಒ ಗಾಯತ್ರಿ, ಎಸ್ಪಿ ಶಿವಕುಮಾರ್, ಎಡಿಸಿ ಕಾತ್ಯಾಯಿನಿ ದೇವಿ, ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕಿ ದೀಪ ಜೆ.ಕಂಟ್ರಾಕ್ಟರ್‌, ಅಧಿಕಾರಿಗಳು ಹಾಜರಿದ್ದರು.

andolanait

Recent Posts

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

19 mins ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

41 mins ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

1 hour ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

4 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

4 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

4 hours ago