ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು.
ಬೆಳಿಗ್ಗೆ 9ರ ವೇಳೆಗೆ ಒಂದೆಡೆ ಸೇರಿದ ನಾಗರಿಕರು ಸರಕಾರದ ಆಡಳಿತದಿಂದ ಹೇಗೆ ಭ್ರಮ ನಿರಸನವಾಗಿದೆ..ಲಂಚ.ಬ್ರಷ್ಡಾಚಾರ, ವಿಳಂಬ ನೀತಿಗಳು ನಾಗರಿಕರ ದೈನಂದಿನ ಬದುಕನ್ನು ಹೈರಾಣ ಮಾಡಿದೆ ಎಂದು ಎಳೆ ಎಳೆಯಾಗಿ ಬಿಚ್ಚಿಟ್ಟರು.
ನಾಗರಿಕರನ್ನು ಮೈ.ಗ್ರಾ.ಪ ಸಂಚಾಲಕ ಭಾಮಿ.ವಿ.ಶಣೈ ಅವರು ಎಲ್ಲರನ್ನೂ ಸ್ವಾಗತಿಸಿದರು.
ಮೈ.ಗ್ರಾ.ಪದ ಆಜೀವ ಸದಸ್ಯ ಕೊಸು.ನರಸಿಂಹ ಮೂರ್ತಿ, ಸಿ.ಎಫ್.ಟಿ.ಆರ್.ಐ ನ ನಿವೃತ್ತ ನಿರ್ದೇಶಕ ವಿ.ಪ್ರಕಾಶ್.ಮೇ.ಜ.ಒಂಬತ್ಕಡರೆ, ವೆಂಕಟೇಶ ರಾವ್ ಉಷಾ ಡಾ.ಜಯರಾಮ್ ಮುಂತಾವರು ಸತ್ಯಾಗ್ರಹದ ಕುರಿತು ಮಾತನಾಡಿ ಸರಕಾರಿ ಕಚೇರಿಗಳು ವಿಶೇಷವಾಗಿ ಪ್ರಾದೇಶಿಕ ಸಾರಿಗೆ ಕಚೇರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹಲವು ಇಲಾಖೆಯ ಬಗ್ಗೆ ತಮ್ಮ ಅನುಭವವನ್ನು ತೆರೆದಿಟ್ಟರು. ಸತ್ಯಾಗ್ರಹದಲ್ಲಿ ಮೂವತ್ತು ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…