ಜಿಲ್ಲೆಗಳು

ಅನಧಿಕೃತ ಫ್ಲೆಕ್ಸ್ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ:ನಗರದ ಬಿ.ರಾಚಯ್ಯ ಜೋಡಿರಸ್ತೆಯ ವಿಭಜಕಗಳ ಮೇಲೆ ಅಳವಡಿಸಿರುವ ಅನಧೀಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಜೋಡಿರಸ್ತೆಯ ವಿಭಜಕದ ಮೇಲೆ ಯಾರೊಬ್ಬರ ಫ್ಲೆಕ್ಸ್ ಹಾಕಬಾರದು ಎಂದು ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನವಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಹ ಈ ನಿರ್ದಿಷ್ಟ ಸ್ಥಳದಲ್ಲಿ ಫ್ಲೆಕ್ಸ್ ಹಾಕದಿರುವಂತೆ ನಗರಸಭೆ ಪೌರಾಯುಕ್ತರಿಗೆ ಲಿಖಿತ ಪತ್ರ ನೀಡಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಆದರೂ, ಎಲ್ಲ ಸೂಚನೆಗಳನ್ನು ಗಾಳಿಗೆ ತೂರಿ ಅನಧೀಕೃತ ಫ್ಲೆಕ್ಸ್ ಹಾಕಲಾಗುತ್ತಿದೆ. ರಾಜಕೀಉ ಒತ್ತಡಕ್ಕೆ ಪೌರಾಯುಕ್ತರು ಮಣಿದಿದ್ದಾರೆ. ತಕ್ಷಣ ಪೌರಾಯುಕ್ತರು ಎಚ್ಚೆತ್ತು ಫ್ಲೆಕ್ಸ್‌ಗಳನ್ನು ತೆರವು ಮಾಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್, ನಗರಸಭೆ ಸದಸ್ಯರಾದ ಎಂ.ಮಹೇಶ್, ಕಲೀಲ್ ಉಲ್ಲಾ, ಮಹಮ್ಮದ್ ಅಮೀಕ್, ಇಸ್ರಾರ್ ಪಾಷಾ ಇತರರಿದ್ದರು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago