ಚಾಮರಾಜನಗರ:ನಗರದ ಬಿ.ರಾಚಯ್ಯ ಜೋಡಿರಸ್ತೆಯ ವಿಭಜಕಗಳ ಮೇಲೆ ಅಳವಡಿಸಿರುವ ಅನಧೀಕೃತ ಫ್ಲೆಕ್ಸ್ಗಳನ್ನು ತೆರವುಗೊಳಿಸಬೇಕು ಎಂದು ಎಸ್ಡಿಪಿಐ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಜೋಡಿರಸ್ತೆಯ ವಿಭಜಕದ ಮೇಲೆ ಯಾರೊಬ್ಬರ ಫ್ಲೆಕ್ಸ್ ಹಾಕಬಾರದು ಎಂದು ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನವಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಹ ಈ ನಿರ್ದಿಷ್ಟ ಸ್ಥಳದಲ್ಲಿ ಫ್ಲೆಕ್ಸ್ ಹಾಕದಿರುವಂತೆ ನಗರಸಭೆ ಪೌರಾಯುಕ್ತರಿಗೆ ಲಿಖಿತ ಪತ್ರ ನೀಡಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಆದರೂ, ಎಲ್ಲ ಸೂಚನೆಗಳನ್ನು ಗಾಳಿಗೆ ತೂರಿ ಅನಧೀಕೃತ ಫ್ಲೆಕ್ಸ್ ಹಾಕಲಾಗುತ್ತಿದೆ. ರಾಜಕೀಉ ಒತ್ತಡಕ್ಕೆ ಪೌರಾಯುಕ್ತರು ಮಣಿದಿದ್ದಾರೆ. ತಕ್ಷಣ ಪೌರಾಯುಕ್ತರು ಎಚ್ಚೆತ್ತು ಫ್ಲೆಕ್ಸ್ಗಳನ್ನು ತೆರವು ಮಾಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್, ನಗರಸಭೆ ಸದಸ್ಯರಾದ ಎಂ.ಮಹೇಶ್, ಕಲೀಲ್ ಉಲ್ಲಾ, ಮಹಮ್ಮದ್ ಅಮೀಕ್, ಇಸ್ರಾರ್ ಪಾಷಾ ಇತರರಿದ್ದರು.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…