ಜಿಲ್ಲೆಗಳು

ಬಲಿಜ ಸಮುದಾಯವನ್ನು 2ಎ ಪಟ್ಟಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು: ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ೨ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಲಿಜ ಪ್ರವರ್ಗ ೨ಎ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ವಿವಿಧ ಸಮುದಾಯಗಳಿಗೆ ಮೀಸಲಾತಿಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುತ್ತಿರುವುದು ಸ್ವಾಗತಾರ್ಹ. ರಾಜ್ಯದಲ್ಲಿ ಬಲಿಜ ಹಾಗೂ ಇದರ ಉಪಜಾತಿಗೆ ಸೇರಿರುವ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯದಲ್ಲೊಂದಾಗಿದ್ದು, ಈ ಸಮುದಾಯವನ್ನು ಹಿಂದುಳಿದ ಪಟ್ಟಿಯಲ್ಲಿ ಸೇರಿಸಲಾಗಿದೆ. ಅತಿ ಹಿಂದುಳಿದ ಈ ಸಮಾಜವನ್ನು ಹಿಂದುಳಿದ ವರ್ಗದ ೨ಎ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಬಲಿಜ ಸಮುದಾಯಕ್ಕೆ ಸರ್ಕಾರಿ ಉದ್ಯೋಗದಲ್ಲಿ ಸೂಕ್ತ ಮೀಸಲಾತಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸೂಕ್ತ ಪ್ರಾತಿನಿಧ್ಯ ಒದಗಿಸಬೇಕು. ಇತರೆ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವಂತೆ ಕರ್ನಾಟಕ ಬಲಿಜ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ ಬಲಿಜ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ಕೈವಾರ ತಾತಯ್ಯನವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ತರಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನಗರ ಸಂಚಾಲಕ ಜೆ.ಮಂಜುನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ೨ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಲಿಜ ಪ್ರವರ್ಗ ೨ಎ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮೇಣದ ಬತ್ತಿ ಪ್ರತಿಭಟನೆ ನಡೆಸಲಾಯಿತು.

 

andolana

Recent Posts

ಅಪಘಾತದ ನೆಪದಲ್ಲಿ ಹಣ ದೋಚಾಟ: ₹80 ಸಾವಿರ ಕಳವು ಮಾಡಿದ ಇಬ್ಬರು ಪೊಲೀಸ್ ವಶಕ್ಕೆ

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ…

3 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…

29 mins ago

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

52 mins ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

1 hour ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

1 hour ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

2 hours ago