ಮೈಸೂರು: ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ೨ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಲಿಜ ಪ್ರವರ್ಗ ೨ಎ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ವಿವಿಧ ಸಮುದಾಯಗಳಿಗೆ ಮೀಸಲಾತಿಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುತ್ತಿರುವುದು ಸ್ವಾಗತಾರ್ಹ. ರಾಜ್ಯದಲ್ಲಿ ಬಲಿಜ ಹಾಗೂ ಇದರ ಉಪಜಾತಿಗೆ ಸೇರಿರುವ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯದಲ್ಲೊಂದಾಗಿದ್ದು, ಈ ಸಮುದಾಯವನ್ನು ಹಿಂದುಳಿದ ಪಟ್ಟಿಯಲ್ಲಿ ಸೇರಿಸಲಾಗಿದೆ. ಅತಿ ಹಿಂದುಳಿದ ಈ ಸಮಾಜವನ್ನು ಹಿಂದುಳಿದ ವರ್ಗದ ೨ಎ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಬಲಿಜ ಸಮುದಾಯಕ್ಕೆ ಸರ್ಕಾರಿ ಉದ್ಯೋಗದಲ್ಲಿ ಸೂಕ್ತ ಮೀಸಲಾತಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸೂಕ್ತ ಪ್ರಾತಿನಿಧ್ಯ ಒದಗಿಸಬೇಕು. ಇತರೆ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವಂತೆ ಕರ್ನಾಟಕ ಬಲಿಜ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ ಬಲಿಜ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ಕೈವಾರ ತಾತಯ್ಯನವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ತರಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನಗರ ಸಂಚಾಲಕ ಜೆ.ಮಂಜುನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ೨ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಲಿಜ ಪ್ರವರ್ಗ ೨ಎ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮೇಣದ ಬತ್ತಿ ಪ್ರತಿಭಟನೆ ನಡೆಸಲಾಯಿತು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…