ಜಿಲ್ಲೆಗಳು

ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ

ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು.
ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಂಚಿನ ಗ್ರಾಮಗಳ ಫಸಲಿಗೆ ಆನೆ, ಹಂದಿಗಳ ಹಾವಳಿ ಹೆಚ್ಚಾಗಿದೆ. ರೈತರು ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ ಎಂದು ದೂರಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಕಾಡಾನೆಗಳ ಹಾವಳಿ ಹೆಚ್ಚಿದ್ದು ಹಾಡಹಗಲೇ ಜಮೀನಿಗೆ ನುಗ್ಗುತ್ತಿವೆ. ಅರಣ್ಯ ಇಲಾಖೆ, ಜನಪ್ರತಿನಿಧಿಗಳು ಕಿಂಚಿತ್ತೂ ಗಮನಹರಿಸುತ್ತಿಲ್ಲ. ಭತ್ತ, ಅಡಕೆ, ಬಾಳೆ, ಕಾಫಿ, ತೆಂಗು ಬೆಳೆಗಳು ಹಾನಿಯಾಗಿವೆ ಎಂದು ದೂರಿದರು.
ಈ ಬಗ್ಗೆ ಹಲವು ಬಾರಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಸ್ಥಳಕ್ಕೆ ಡಿ.ಸಿ.ಎಫ್. ಅವರು ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ರೈತ ಗೌಡಳ್ಳಿ ಸೋಮಣ್ಣ ಮಾತನಾಡಿ, ಕಾಡಾನೆಗಳ ಹಿಂಡು ತೋಟಕ್ಕೆ ನುಗ್ಗಿ ಫಸಲು ನಾಶಪಡಿಸುತ್ತಿವೆ. ಇಳುವರಿಗೂ ಸಂಚಕಾರ ತಂದೊಡ್ಡುತ್ತಿವೆ. ಹತ್ತಾರು ಸಮಸ್ಯೆಗಳ ನಡುವೆ ಬೆಳೆದ ಫಸಲು ಕೈ ಸೇರುತ್ತಿಲ್ಲ ಎಂದು ದೂರಿದರು.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಯ್ಯ ಭೇಟಿ ನೀಡಿ. ಫೆ.13 ರಂದು ಅರಣ್ಯ ಇಲಾಖೆಯ ಮೇಲಧಿಕಾರಿಗಳು ಹಾಗೂ ರೈತರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
ತಾಲ್ಲೂಕು ರೈತ ಸಂಘದ ಅಧ್ಯಕ್ಷ ವ್ಲಷಬೇಂದ್ರ, ನಾಗರಾಜ್, ಮಹದೇವಸ್ವಾಮಿ, ನಾಗೇಂದ್ರ, ಅಂಬಳೆ ಮಹದೇವಪ್ಪ, ಶ್ರೀನಿವಾಸ, ರೈತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

andolanait

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

8 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

8 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

9 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

10 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

10 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

12 hours ago