ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು.
ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಂಚಿನ ಗ್ರಾಮಗಳ ಫಸಲಿಗೆ ಆನೆ, ಹಂದಿಗಳ ಹಾವಳಿ ಹೆಚ್ಚಾಗಿದೆ. ರೈತರು ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ ಎಂದು ದೂರಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಕಾಡಾನೆಗಳ ಹಾವಳಿ ಹೆಚ್ಚಿದ್ದು ಹಾಡಹಗಲೇ ಜಮೀನಿಗೆ ನುಗ್ಗುತ್ತಿವೆ. ಅರಣ್ಯ ಇಲಾಖೆ, ಜನಪ್ರತಿನಿಧಿಗಳು ಕಿಂಚಿತ್ತೂ ಗಮನಹರಿಸುತ್ತಿಲ್ಲ. ಭತ್ತ, ಅಡಕೆ, ಬಾಳೆ, ಕಾಫಿ, ತೆಂಗು ಬೆಳೆಗಳು ಹಾನಿಯಾಗಿವೆ ಎಂದು ದೂರಿದರು.
ಈ ಬಗ್ಗೆ ಹಲವು ಬಾರಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಸ್ಥಳಕ್ಕೆ ಡಿ.ಸಿ.ಎಫ್. ಅವರು ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ರೈತ ಗೌಡಳ್ಳಿ ಸೋಮಣ್ಣ ಮಾತನಾಡಿ, ಕಾಡಾನೆಗಳ ಹಿಂಡು ತೋಟಕ್ಕೆ ನುಗ್ಗಿ ಫಸಲು ನಾಶಪಡಿಸುತ್ತಿವೆ. ಇಳುವರಿಗೂ ಸಂಚಕಾರ ತಂದೊಡ್ಡುತ್ತಿವೆ. ಹತ್ತಾರು ಸಮಸ್ಯೆಗಳ ನಡುವೆ ಬೆಳೆದ ಫಸಲು ಕೈ ಸೇರುತ್ತಿಲ್ಲ ಎಂದು ದೂರಿದರು.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಯ್ಯ ಭೇಟಿ ನೀಡಿ. ಫೆ.13 ರಂದು ಅರಣ್ಯ ಇಲಾಖೆಯ ಮೇಲಧಿಕಾರಿಗಳು ಹಾಗೂ ರೈತರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
ತಾಲ್ಲೂಕು ರೈತ ಸಂಘದ ಅಧ್ಯಕ್ಷ ವ್ಲಷಬೇಂದ್ರ, ನಾಗರಾಜ್, ಮಹದೇವಸ್ವಾಮಿ, ನಾಗೇಂದ್ರ, ಅಂಬಳೆ ಮಹದೇವಪ್ಪ, ಶ್ರೀನಿವಾಸ, ರೈತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…