ಜಿಲ್ಲೆಗಳು

ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ

ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು.
ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಂಚಿನ ಗ್ರಾಮಗಳ ಫಸಲಿಗೆ ಆನೆ, ಹಂದಿಗಳ ಹಾವಳಿ ಹೆಚ್ಚಾಗಿದೆ. ರೈತರು ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ ಎಂದು ದೂರಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಕಾಡಾನೆಗಳ ಹಾವಳಿ ಹೆಚ್ಚಿದ್ದು ಹಾಡಹಗಲೇ ಜಮೀನಿಗೆ ನುಗ್ಗುತ್ತಿವೆ. ಅರಣ್ಯ ಇಲಾಖೆ, ಜನಪ್ರತಿನಿಧಿಗಳು ಕಿಂಚಿತ್ತೂ ಗಮನಹರಿಸುತ್ತಿಲ್ಲ. ಭತ್ತ, ಅಡಕೆ, ಬಾಳೆ, ಕಾಫಿ, ತೆಂಗು ಬೆಳೆಗಳು ಹಾನಿಯಾಗಿವೆ ಎಂದು ದೂರಿದರು.
ಈ ಬಗ್ಗೆ ಹಲವು ಬಾರಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಸ್ಥಳಕ್ಕೆ ಡಿ.ಸಿ.ಎಫ್. ಅವರು ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ರೈತ ಗೌಡಳ್ಳಿ ಸೋಮಣ್ಣ ಮಾತನಾಡಿ, ಕಾಡಾನೆಗಳ ಹಿಂಡು ತೋಟಕ್ಕೆ ನುಗ್ಗಿ ಫಸಲು ನಾಶಪಡಿಸುತ್ತಿವೆ. ಇಳುವರಿಗೂ ಸಂಚಕಾರ ತಂದೊಡ್ಡುತ್ತಿವೆ. ಹತ್ತಾರು ಸಮಸ್ಯೆಗಳ ನಡುವೆ ಬೆಳೆದ ಫಸಲು ಕೈ ಸೇರುತ್ತಿಲ್ಲ ಎಂದು ದೂರಿದರು.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಯ್ಯ ಭೇಟಿ ನೀಡಿ. ಫೆ.13 ರಂದು ಅರಣ್ಯ ಇಲಾಖೆಯ ಮೇಲಧಿಕಾರಿಗಳು ಹಾಗೂ ರೈತರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
ತಾಲ್ಲೂಕು ರೈತ ಸಂಘದ ಅಧ್ಯಕ್ಷ ವ್ಲಷಬೇಂದ್ರ, ನಾಗರಾಜ್, ಮಹದೇವಸ್ವಾಮಿ, ನಾಗೇಂದ್ರ, ಅಂಬಳೆ ಮಹದೇವಪ್ಪ, ಶ್ರೀನಿವಾಸ, ರೈತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

andolanait

Recent Posts

ಓದುಗರ ಪತ್ರ | ಮತದಾನ ಪದ್ಧತಿಯಲ್ಲೂ ಮಾರ್ಪಾಡಾಗಲಿ

ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…

28 seconds ago

ಓದುಗರ ಪತ್ರ | ಎಸ್‌ಐಆರ್ ಗೊಂದಲ ಪರಿಹರಿಸಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು…

4 mins ago

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

17 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

18 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

19 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

20 hours ago