ಜಿಲ್ಲೆಗಳು

ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ

ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು.
ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಂಚಿನ ಗ್ರಾಮಗಳ ಫಸಲಿಗೆ ಆನೆ, ಹಂದಿಗಳ ಹಾವಳಿ ಹೆಚ್ಚಾಗಿದೆ. ರೈತರು ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ ಎಂದು ದೂರಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಕಾಡಾನೆಗಳ ಹಾವಳಿ ಹೆಚ್ಚಿದ್ದು ಹಾಡಹಗಲೇ ಜಮೀನಿಗೆ ನುಗ್ಗುತ್ತಿವೆ. ಅರಣ್ಯ ಇಲಾಖೆ, ಜನಪ್ರತಿನಿಧಿಗಳು ಕಿಂಚಿತ್ತೂ ಗಮನಹರಿಸುತ್ತಿಲ್ಲ. ಭತ್ತ, ಅಡಕೆ, ಬಾಳೆ, ಕಾಫಿ, ತೆಂಗು ಬೆಳೆಗಳು ಹಾನಿಯಾಗಿವೆ ಎಂದು ದೂರಿದರು.
ಈ ಬಗ್ಗೆ ಹಲವು ಬಾರಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಸ್ಥಳಕ್ಕೆ ಡಿ.ಸಿ.ಎಫ್. ಅವರು ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ರೈತ ಗೌಡಳ್ಳಿ ಸೋಮಣ್ಣ ಮಾತನಾಡಿ, ಕಾಡಾನೆಗಳ ಹಿಂಡು ತೋಟಕ್ಕೆ ನುಗ್ಗಿ ಫಸಲು ನಾಶಪಡಿಸುತ್ತಿವೆ. ಇಳುವರಿಗೂ ಸಂಚಕಾರ ತಂದೊಡ್ಡುತ್ತಿವೆ. ಹತ್ತಾರು ಸಮಸ್ಯೆಗಳ ನಡುವೆ ಬೆಳೆದ ಫಸಲು ಕೈ ಸೇರುತ್ತಿಲ್ಲ ಎಂದು ದೂರಿದರು.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಯ್ಯ ಭೇಟಿ ನೀಡಿ. ಫೆ.13 ರಂದು ಅರಣ್ಯ ಇಲಾಖೆಯ ಮೇಲಧಿಕಾರಿಗಳು ಹಾಗೂ ರೈತರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
ತಾಲ್ಲೂಕು ರೈತ ಸಂಘದ ಅಧ್ಯಕ್ಷ ವ್ಲಷಬೇಂದ್ರ, ನಾಗರಾಜ್, ಮಹದೇವಸ್ವಾಮಿ, ನಾಗೇಂದ್ರ, ಅಂಬಳೆ ಮಹದೇವಪ್ಪ, ಶ್ರೀನಿವಾಸ, ರೈತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 hour ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago