ಮೈಸೂರು :ನೇತಾಜಿ ನಗರದಲ್ಲಿರುವ ಗಣಪತಿ ದೇವಾಲಯದ ಆವರಣದಲ್ಲಿಂದು ಪರಿಸರ ಬಳಗದ ಸದಸ್ಯರುಗಳು ಹಾಗೂ ನೇತಾಜಿ ನಗರದ ನಿವಾಸಿಗಳು ಉತ್ತಮ ಆಡಳಿತಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಒಗ್ಗಟ್ಟಿನಿಂದ ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು, ಇದಕ್ಕೆ ಪರಿಸರ ಬಳಗದ ಮಾಡಿರುವ ಕೆಲಸಗಳು ಸಾಕ್ಷಿ ಎಂದು ಲೀಲಾ ಶಿವಕುಮಾರ್ ಹೇಳಿದರು. ಮುಂದಿನ ಮಂಗಳವಾರ ನಮ್ಮ ಬಡಾವಣೆಗಳ ಕೆಲಸಗಳನ್ನು ಬೇಗ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಒತ್ತಡ ಹಾಕೋಣ ಎಂದು ರಾಜಗೋಪಾಲ್ ಹೇಳಿದರು.
ಸತೀಶ್ ಮಹಂತ ಮಾತನಾಡಿ ಬಡಾವಣೆಯ ನಿವಾಸಿಗಳು ಆಗಾಗ್ಗೆ ಸಭೆ ಸೇರಿ ಚರ್ಚೆ ಮಾಡೋಣ ಎಂಬ ಸಲಹೆ ಕೊಟ್ಟರು.
ನೇತಾಜಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಉಮೇಶ್ ಮಾತನಾಡಿ ಇಂದಿನ ಸಭೆಯ ತೀರ್ಮಾನಗಳನ್ನು ಕಾರ್ಯರೂಪಕ್ಕೆ ತರಲು ಸಂಕಲ್ಪ ಮಾಡಿದರು.
ಸತ್ಯಾಗ್ರಹದಲ್ಲಿ ಪರಿಸರ ಬಳಗದ ಸದಸ್ಯರಾದ ಜವರಪ್ಪ, ಸುಶೀಲಾ, ಶ್ರೀಲಕ್ಷ್ಮಿ, ಸುಮಲತಾ, ಗಂಟಯ್ಯ ಡಾ. ಕೃಷ್ಣಮೂರ್ತಿ ಹಾಗೂ ನೇತಾಜಿ ನಗರ ನಿವಾಸಿಗಳಾದ ಕೃಷ್ಣ, ಗುರುಸ್ವಾಮಿ, ಲೋಲ ಕುಮಾರ್, ಶಿವಪ್ಪ,ಚಂದ್ರಶೇಖರ್, ಜನಾರ್ದನ, ಬಸಪ್ಪ ಸೇರಿದಂತೆ ಮೂವತ್ತೈದಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…
ಮೈಸೂರು : ಮಹಾರಾಷ್ಟ್ರದ ಕಾರ್ಜತ್ನಲ್ಲಿ ಇತ್ತೀಚೆಗೆ ನಡೆದ ಹೂಫ್ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್ಶಿಪ್ನಲ್ಲಿ ಮೈಸೂರಿನ ಚಾಮುಂಡಿ…