ಮೈಸೂರು :ನೇತಾಜಿ ನಗರದಲ್ಲಿರುವ ಗಣಪತಿ ದೇವಾಲಯದ ಆವರಣದಲ್ಲಿಂದು ಪರಿಸರ ಬಳಗದ ಸದಸ್ಯರುಗಳು ಹಾಗೂ ನೇತಾಜಿ ನಗರದ ನಿವಾಸಿಗಳು ಉತ್ತಮ ಆಡಳಿತಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಒಗ್ಗಟ್ಟಿನಿಂದ ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು, ಇದಕ್ಕೆ ಪರಿಸರ ಬಳಗದ ಮಾಡಿರುವ ಕೆಲಸಗಳು ಸಾಕ್ಷಿ ಎಂದು ಲೀಲಾ ಶಿವಕುಮಾರ್ ಹೇಳಿದರು. ಮುಂದಿನ ಮಂಗಳವಾರ ನಮ್ಮ ಬಡಾವಣೆಗಳ ಕೆಲಸಗಳನ್ನು ಬೇಗ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಒತ್ತಡ ಹಾಕೋಣ ಎಂದು ರಾಜಗೋಪಾಲ್ ಹೇಳಿದರು.
ಸತೀಶ್ ಮಹಂತ ಮಾತನಾಡಿ ಬಡಾವಣೆಯ ನಿವಾಸಿಗಳು ಆಗಾಗ್ಗೆ ಸಭೆ ಸೇರಿ ಚರ್ಚೆ ಮಾಡೋಣ ಎಂಬ ಸಲಹೆ ಕೊಟ್ಟರು.
ನೇತಾಜಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಉಮೇಶ್ ಮಾತನಾಡಿ ಇಂದಿನ ಸಭೆಯ ತೀರ್ಮಾನಗಳನ್ನು ಕಾರ್ಯರೂಪಕ್ಕೆ ತರಲು ಸಂಕಲ್ಪ ಮಾಡಿದರು.
ಸತ್ಯಾಗ್ರಹದಲ್ಲಿ ಪರಿಸರ ಬಳಗದ ಸದಸ್ಯರಾದ ಜವರಪ್ಪ, ಸುಶೀಲಾ, ಶ್ರೀಲಕ್ಷ್ಮಿ, ಸುಮಲತಾ, ಗಂಟಯ್ಯ ಡಾ. ಕೃಷ್ಣಮೂರ್ತಿ ಹಾಗೂ ನೇತಾಜಿ ನಗರ ನಿವಾಸಿಗಳಾದ ಕೃಷ್ಣ, ಗುರುಸ್ವಾಮಿ, ಲೋಲ ಕುಮಾರ್, ಶಿವಪ್ಪ,ಚಂದ್ರಶೇಖರ್, ಜನಾರ್ದನ, ಬಸಪ್ಪ ಸೇರಿದಂತೆ ಮೂವತ್ತೈದಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…