ಜಿಲ್ಲೆಗಳು

ಆಡಳಿತ ಚುರುಕುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು :ನೇತಾಜಿ ನಗರದಲ್ಲಿರುವ ಗಣಪತಿ  ದೇವಾಲಯದ ಆವರಣದಲ್ಲಿಂದು ಪರಿಸರ ಬಳಗದ ಸದಸ್ಯರುಗಳು ಹಾಗೂ ನೇತಾಜಿ ನಗರದ ನಿವಾಸಿಗಳು ಉತ್ತಮ ಆಡಳಿತಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಪರಶುರಾಮೇಗೌಡ ಅವರು ಸತ್ಯಾಗ್ರಹ ಸಭೆಯ ಉದ್ದೇಶಗಳನ್ನು ತಿಳಿಸಿದರು. ಬಳಿಕ ಮಾತನಾಡಿದ ಶಿವಬಸಪ್ಪ ಅವರು ನೇತಾಜಿ ನಗರ ಮತ್ತು ಸುತ್ತ ಮುತ್ತ ಇರುವ ಹಲವಾರು ಬಡಾವಣೆಗಳ ರಸ್ತೆಗಳು ತುಂಬಾ ಹಾಳಾಗಿದ್ದು ಸಂಚಾರ ದುಸ್ತರವಾಗಿದೆ. ತುರ್ತಾಗಿ ರಸ್ತೆಗಳನ್ನು ದುರಸ್ತಿ ಮಾಡದಿದ್ದರೆ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸುವ ಸಲಹೆ ಕೊಟ್ಟರು.ಶಾಸಕರು ಮತ್ತು ಅಧಿಕಾರಿಗಳನ್ನು ಬೆಂಬತ್ತಿ ನಮ್ಮ ಬಡಾವಣೆಗಳ ಕೆಲಸಗಳನ್ನು ಮಾಡಿಸಿಕೊಳ್ಳೋಣ ಎಂದು ಸವಿತಾ ಗೌಡ ಹೇಳಿದರು.
ಒಗ್ಗಟ್ಟಿನಿಂದ ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು, ಇದಕ್ಕೆ ಪರಿಸರ ಬಳಗದ ಮಾಡಿರುವ ಕೆಲಸಗಳು ಸಾಕ್ಷಿ ಎಂದು ಲೀಲಾ ಶಿವಕುಮಾರ್ ಹೇಳಿದರು. ಮುಂದಿನ ಮಂಗಳವಾರ ನಮ್ಮ ಬಡಾವಣೆಗಳ ಕೆಲಸಗಳನ್ನು ಬೇಗ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಒತ್ತಡ ಹಾಕೋಣ ಎಂದು ರಾಜಗೋಪಾಲ್ ಹೇಳಿದರು.
ಸತೀಶ್ ಮಹಂತ ಮಾತನಾಡಿ ಬಡಾವಣೆಯ ನಿವಾಸಿಗಳು ಆಗಾಗ್ಗೆ ಸಭೆ ಸೇರಿ ಚರ್ಚೆ ಮಾಡೋಣ ಎಂಬ ಸಲಹೆ ಕೊಟ್ಟರು.
ನೇತಾಜಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಉಮೇಶ್ ಮಾತನಾಡಿ ಇಂದಿನ ಸಭೆಯ ತೀರ್ಮಾನಗಳನ್ನು ಕಾರ್ಯರೂಪಕ್ಕೆ ತರಲು ಸಂಕಲ್ಪ ಮಾಡಿದರು.
ಸತ್ಯಾಗ್ರಹದಲ್ಲಿ ಪರಿಸರ ಬಳಗದ ಸದಸ್ಯರಾದ ಜವರಪ್ಪ, ಸುಶೀಲಾ, ಶ್ರೀಲಕ್ಷ್ಮಿ, ಸುಮಲತಾ, ಗಂಟಯ್ಯ ಡಾ. ಕೃಷ್ಣಮೂರ್ತಿ ಹಾಗೂ ನೇತಾಜಿ ನಗರ ನಿವಾಸಿಗಳಾದ ಕೃಷ್ಣ, ಗುರುಸ್ವಾಮಿ, ಲೋಲ ಕುಮಾರ್, ಶಿವಪ್ಪ,ಚಂದ್ರಶೇಖರ್, ಜನಾರ್ದನ, ಬಸಪ್ಪ ಸೇರಿದಂತೆ ಮೂವತ್ತೈದಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

6 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

6 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

6 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

6 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

6 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

6 hours ago