ಮೈಸೂರು :ನೇತಾಜಿ ನಗರದಲ್ಲಿರುವ ಗಣಪತಿ ದೇವಾಲಯದ ಆವರಣದಲ್ಲಿಂದು ಪರಿಸರ ಬಳಗದ ಸದಸ್ಯರುಗಳು ಹಾಗೂ ನೇತಾಜಿ ನಗರದ ನಿವಾಸಿಗಳು ಉತ್ತಮ ಆಡಳಿತಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಒಗ್ಗಟ್ಟಿನಿಂದ ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು, ಇದಕ್ಕೆ ಪರಿಸರ ಬಳಗದ ಮಾಡಿರುವ ಕೆಲಸಗಳು ಸಾಕ್ಷಿ ಎಂದು ಲೀಲಾ ಶಿವಕುಮಾರ್ ಹೇಳಿದರು. ಮುಂದಿನ ಮಂಗಳವಾರ ನಮ್ಮ ಬಡಾವಣೆಗಳ ಕೆಲಸಗಳನ್ನು ಬೇಗ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಒತ್ತಡ ಹಾಕೋಣ ಎಂದು ರಾಜಗೋಪಾಲ್ ಹೇಳಿದರು.
ಸತೀಶ್ ಮಹಂತ ಮಾತನಾಡಿ ಬಡಾವಣೆಯ ನಿವಾಸಿಗಳು ಆಗಾಗ್ಗೆ ಸಭೆ ಸೇರಿ ಚರ್ಚೆ ಮಾಡೋಣ ಎಂಬ ಸಲಹೆ ಕೊಟ್ಟರು.
ನೇತಾಜಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಉಮೇಶ್ ಮಾತನಾಡಿ ಇಂದಿನ ಸಭೆಯ ತೀರ್ಮಾನಗಳನ್ನು ಕಾರ್ಯರೂಪಕ್ಕೆ ತರಲು ಸಂಕಲ್ಪ ಮಾಡಿದರು.
ಸತ್ಯಾಗ್ರಹದಲ್ಲಿ ಪರಿಸರ ಬಳಗದ ಸದಸ್ಯರಾದ ಜವರಪ್ಪ, ಸುಶೀಲಾ, ಶ್ರೀಲಕ್ಷ್ಮಿ, ಸುಮಲತಾ, ಗಂಟಯ್ಯ ಡಾ. ಕೃಷ್ಣಮೂರ್ತಿ ಹಾಗೂ ನೇತಾಜಿ ನಗರ ನಿವಾಸಿಗಳಾದ ಕೃಷ್ಣ, ಗುರುಸ್ವಾಮಿ, ಲೋಲ ಕುಮಾರ್, ಶಿವಪ್ಪ,ಚಂದ್ರಶೇಖರ್, ಜನಾರ್ದನ, ಬಸಪ್ಪ ಸೇರಿದಂತೆ ಮೂವತ್ತೈದಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…