ಜಿಲ್ಲೆಗಳು

ಎನ್‌ಟಿಎಂಎಸ್ ಶಾಲೆ ಉಳಿಸಲು ಆಗ್ರಹಿಸಿ ಮುಂದುವರಿದ ಹೋರಾಟ

ಮೈಸೂರು: ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ಅರಸರು ಕಟ್ಟಿಸಿದ್ದ ಎನ್‌ಟಿಎಂಎಸ್ ಶಾಲೆ ಕಟ್ಟಡವನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಂಗಳವಾರ ನಗರದ ಚಾಮುಂಡಿಪುರಂನಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನದ ಮುಂಭಾಗ ಜಮಾವಣೆಗೊಂಡ ಸಮಿತಿ ಸದಸ್ಯರು ರಾಮಕೃಷ್ಣ ಆಶ್ರಮದವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಮನೆತನದವರು ಬಡಮಕ್ಕಳಿಗಾಗಿ ನಿರ್ಮಿಸಿದ್ದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅದೇ ಸ್ಥಳದಲ್ಲಿ ಹೊಸದಾಗಿ ಶಾಲೆ ನಿರ್ಮಿಸುತ್ತೇವೆ ಎಂದು ಅನೇಕ ಪ್ರಮುಖರ ಮುಂದೆ ಭರವಸೆ ನೀಡಿದ್ದರು. ಆದರೂ ಅವರು ತಮ್ಮ ಒಪ್ಪಂದವನ್ನು ಮರೆತಿದ್ದಾರೆ ಎಂದರು.

ದೇಶದ ಒಳಿತಿಗಾಗಿ ತಮ್ಮ ಜೀವನ ಸವೆಸಿದ ತಗಡೂರು ರಾಮಚಂದ್ರ ರಾವ್ ಅವರ ತತ್ವ, ಆದರ್ಶಗಳು ರಾಮಕೃಷ್ಣ ಆಶ್ರಮದವರ ಮನಸ್ಸಿನ ಮೇಲೆ ಪರಿಣಾಮ ಬೀರಲಿ ಎಂಬ ಉದ್ದೇಶದಿಂದ ನಾವು ಅವರ ಹೆಸರಿನ ಉದ್ಯಾನದ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ರಾಮಕೃಷ್ಣ ಆಶ್ರಮದವರು ತಮ್ಮ ಮಾತನ್ನು ಉಳಿಸಿಕೊಳ್ಳಲು ಈಗಲೂ ಅವಕಾಶವಿದೆ. ಅದೇ ಜಾಗದಲ್ಲಿ ಶಾಲೆ ಹಾಗೂ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸಿಕೊಂಡು ಶಾಲೆಯನ್ನು ಉಳಿಸಬೇಕು. ಇದರಿಂದ ಸ್ವಾಮಿ ವಿವೇಕಾನಂದರ ಆತ್ಮಕ್ಕೂ ಶಾಂತಿ ದೊರಕುತ್ತದೆ ಎಂದು ಹೇಳಿದರು.

ಸಮಿತಿ ಸಂಚಾಲಕ ಎಂ.ಮೋಹನ್ ಕುಮಾರ್‌ಗೌಡ, ರವೀಗೌಡ, ಕೃಷ್ಣ, ರವಿ, ಬಿ.ಮಹದೇವ್, ಬೆಟ್ಟೇಗೌಡ, ಜಿ.ಪ್ರಕಾಶ್, ಬಾಲಕೃಷ್ಣ ಸಂಗಾಪುರ, ಸ್ವಾಮಿ, ಸಿದ್ದಪ್ಪ, ಮುಂತಾದವರು ಹಾಜರಿದ್ದರು.

 

 

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago