ಎನ್ಟಿಎಂಎಸ್ ಶಾಲೆ ಕಟ್ಟಡವನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು: ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ಅರಸರು ಕಟ್ಟಿಸಿದ್ದ ಎನ್ಟಿಎಂಎಸ್ ಶಾಲೆ ಕಟ್ಟಡವನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಗಳವಾರ ನಗರದ ಚಾಮುಂಡಿಪುರಂನಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನದ ಮುಂಭಾಗ ಜಮಾವಣೆಗೊಂಡ ಸಮಿತಿ ಸದಸ್ಯರು ರಾಮಕೃಷ್ಣ ಆಶ್ರಮದವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಮನೆತನದವರು ಬಡಮಕ್ಕಳಿಗಾಗಿ ನಿರ್ಮಿಸಿದ್ದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅದೇ ಸ್ಥಳದಲ್ಲಿ ಹೊಸದಾಗಿ ಶಾಲೆ ನಿರ್ಮಿಸುತ್ತೇವೆ ಎಂದು ಅನೇಕ ಪ್ರಮುಖರ ಮುಂದೆ ಭರವಸೆ ನೀಡಿದ್ದರು. ಆದರೂ ಅವರು ತಮ್ಮ ಒಪ್ಪಂದವನ್ನು ಮರೆತಿದ್ದಾರೆ ಎಂದರು.
ದೇಶದ ಒಳಿತಿಗಾಗಿ ತಮ್ಮ ಜೀವನ ಸವೆಸಿದ ತಗಡೂರು ರಾಮಚಂದ್ರ ರಾವ್ ಅವರ ತತ್ವ, ಆದರ್ಶಗಳು ರಾಮಕೃಷ್ಣ ಆಶ್ರಮದವರ ಮನಸ್ಸಿನ ಮೇಲೆ ಪರಿಣಾಮ ಬೀರಲಿ ಎಂಬ ಉದ್ದೇಶದಿಂದ ನಾವು ಅವರ ಹೆಸರಿನ ಉದ್ಯಾನದ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ರಾಮಕೃಷ್ಣ ಆಶ್ರಮದವರು ತಮ್ಮ ಮಾತನ್ನು ಉಳಿಸಿಕೊಳ್ಳಲು ಈಗಲೂ ಅವಕಾಶವಿದೆ. ಅದೇ ಜಾಗದಲ್ಲಿ ಶಾಲೆ ಹಾಗೂ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸಿಕೊಂಡು ಶಾಲೆಯನ್ನು ಉಳಿಸಬೇಕು. ಇದರಿಂದ ಸ್ವಾಮಿ ವಿವೇಕಾನಂದರ ಆತ್ಮಕ್ಕೂ ಶಾಂತಿ ದೊರಕುತ್ತದೆ ಎಂದು ಹೇಳಿದರು.
ಸಮಿತಿ ಸಂಚಾಲಕ ಎಂ.ಮೋಹನ್ ಕುಮಾರ್ಗೌಡ, ರವೀಗೌಡ, ಕೃಷ್ಣ, ರವಿ, ಬಿ.ಮಹದೇವ್, ಬೆಟ್ಟೇಗೌಡ, ಜಿ.ಪ್ರಕಾಶ್, ಬಾಲಕೃಷ್ಣ ಸಂಗಾಪುರ, ಸ್ವಾಮಿ, ಸಿದ್ದಪ್ಪ, ಮುಂತಾದವರು ಹಾಜರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…