ಮೈಸೂರು: ಮಹಾರಾಣಿ ಕೆಂಪನಂಜಮ್ಮಣ್ಣಿ ಅವರು ಹೆಣ್ಣು ಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್ಟಿಎಂ ಶಾಲೆಯನ್ನು ಕೆಡವಿ ಮೈಸೂರಿಗರಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ತಮ್ಮ ತಪ್ಪನ್ನು ತಿದ್ದಿಕೊಂಡು ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಗಳವಾರ ನಗರದ ದಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ಪುತ್ತಳಿ ಮುಂಭಾಗ ಜವಾವಣೆಗೊಂಡ ಸಮಿತಿ ಸದಸ್ಯರು ಹಾಗೂ ಪ್ರಮುಖರು, ರಾಮಕೃಷ್ಣ ಆಶ್ರಮದವರು ನೀಡಿದ್ದ ವಚನದಂತೆ ನಡೆದುಕೊಳ್ಳಬೇಕು ಎಂದು ಘೋಷಣೆಗಳನ್ನು ಕೂಗಿದರು.
ಶತವಾನದಷ್ಟು ಹಳೆಯದಾದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅಲ್ಲಿ ಹೊಸದಾಗಿ ಶಾಲೆ ನಿರ್ಮಿಸಿ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸುವುದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದೆವು. ಆದರೀಗ ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತನ್ನು ಉಲ್ಲಂಘಿಸಿ ಶಾಲೆಯನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ಮತ್ತೆ ಶಾಲೆ ಉಳಿಸಿ ಹೋರಾಟ ಆರಂಭಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ರಾಮಕೃಷ್ಣ ಆಶ್ರಮದವರು ತಮ್ಮ ಮಾತನ್ನು ಉಳಿಸಿಕೊಳ್ಳಲು ಇಂದಿಗೂ ಅವಕಾಶವಿದೆ. ಮಾತಿಗೆ ತಪ್ಪದಂತೆ ಅವರು ಅದೇ ಜಾಗದಲ್ಲಿ ಶಾಲೆ ಹಾಗೂ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸಿಕೊಂಡು ಶಾಲೆಯನ್ನು ಉಳಿಸಬೇಕು ಎಂದು ಆಗ್ರಹಿಸಿದರು.
ಸಮಿತಿ ಸಂಚಾಲಕರೂ ಆದ ಕರ್ನಾಟಕ ಕಾವಲುಪಡೆ ಅಧ್ಯಕ್ಷ ಎಂ.ಮೋಹನ್ಕುಮಾರ್ ಗೌಡ, ಮಾಜಿ ಮಹಾಪೌರ ಪುರುಷೋತ್ತಮ್, ಟಿ.ರವೀಂದ್ರ, ರವೀಗೌಡ, ಈಶ್ವರ್, ಕೃಷ್ಣ, ರವಿ, ರಾಜ್ ಕಿಶೋರ್, ಸುರೇಶ್, ಪ್ರಕಾಶ್, ಹೊಸೂರು ಕುಮಾರ್, ಯೋಗೇಶ್, ಬಾಲಕಲೃಷ್ಣ ಸಂಗಾಪುರ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…