ಜಿಲ್ಲೆಗಳು

ತಾತಯ್ಯ ಪ್ರತಿಮೆ ಮುಂಭಾಗ ಪ್ರತಿಭಟಿಸಿದ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ

ಮೈಸೂರು: ರಾಜಮನೆತನದ ಕೆಂಪನಂಜಮ್ಮಾಣಿ ಅವರು ಹೆಣ್ಣುಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್‌ಟಿಎಂಎಸ್ ಶಾಲೆಯನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೆ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಮುಂದುವರೆದಿದೆ.

ಮಂಗಳವಾರ ನಗರದ ನಗರ ಸಾರಿಗೆ ಬಸ್ ನಿಲ್ದಾಣ ಮುಂಬಾಗವಿರುವ ತಾತಯ್ಯ ಅವರ ಪ್ರತಿಮೆ ಮುಂಭಾಗ ಜಮಾವಣೆಗೊಂಡ ಸಮಿತಿ ಸದಸ್ಯರು ಹಾಗೂ ಪ್ರಮುಖರು, ರಾಮಕೃಷ್ಣ ಆಶ್ರಮದವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಮನೆತನದವರು ಬಡಮಕ್ಕಳಿಗಾಗಿ ಸ್ಥಾಪಿಸಿದ್ದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅದೇ ಸ್ಥಳದಲ್ಲಿ ಹೊಸದಾಗಿ ಶಾಲೆ ನಿರ್ಮಿಸುತ್ತೇವೆ ಎಂದು ಅನೇಕ ಪ್ರಮುಖರ ಮುಂದೆ ಭರವಸೆ ನೀಡಿದ್ದರು. ಆದರೂ ಅವರು ತಮ್ಮ ಒಪ್ಪಂದವನ್ನು ಮರೆತಿದ್ದಾರೆ ಎಂದರು.

ದೇಶದ ಒಳಿತಿಗಾಗಿ ತಮ್ಮ ಜೀವನ ಸವೆಸಿದ ತಾತಯ್ಯ ಅವರು, ತಮ್ಮ ಜೀವನದುದ್ದಕ್ಕೂ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರಮಿಸಿದರು. ವಸತಿ ನಿಲಯಗಳನ್ನು ಸ್ಥಾಪಿಸಿ ಊಟ, ವಸತಿಯನ್ನು ನೀಡಿದರು. ಅವರ ತ್ಯಾಗ ಮನೋಭಾವ, ತತ್ವ, ಆದರ್ಶಗಳು ರಾಮಕೃಷ್ಣ ಆಶ್ರಮದವರ ಮನಸ್ಸಿನ ಮೇಲೆ ಪರಿಣಾಮ ಬೀರಲಿ ಎಂಬ ಉದ್ದೇಶದಿಂದ ನಾವು ಅವರ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ರಾಮಕೃಷ್ಣ ಆಶ್ರಮದವರು ತಮ್ಮ ಮಾತನ್ನು ಉಳಿಸಿಕೊಳ್ಳಲು ಇಂದಿಗೂ ಅವಕಾಶವಿದೆ. ಅದೇ ಜಾಗದಲ್ಲಿ ಶಾಲೆ ಹಾಗೂ ಉಳಿದ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಿಸಿಕೊಂಡು ಶಾಲೆಯನ್ನು ಉಳಿಸಬೇಕು. ಇದರಿಂದ ವಿವೇಕಾನಂದಸ್ವಾಮಿ ಅವರ ಆತ್ಮಕ್ಕೂ ಶಾಂತಿ ದೊರಕುತ್ತದೆ ಎಂದು ಹೇಳಿದರು.

ಸಮಿತಿಯ ಸಂಚಾಲಕ ಎಂ.ಮೋಹನ್ ಕುಮಾರ್‌ಗೌಡ, ಮಾಜಿ ಮಹಾಪೌರ ಪುರುಷೋತ್ತಮ್, ರತ್ನಮ್ಮ, ಗೋವಿಂದರಾಜು, ರವೀಗೌಡ, ಕೃಷ್ಣ, ರವಿ, ಬಿ.ಮಹದೇವ್, ಬೆಟ್ಟೇಗೌಡ, ಜಿ.ಪ್ರಕಾಶ್, ಬಾಲಕಲೃಷ್ಣ ಸಂಗಾಪುರ, ಸ್ವಾಮಿ, ಸಿದ್ದಪ್ಪ, ಮುಂತಾದವರು ಹಾಜರಿದ್ದರು.

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago