ಮೃಗಾಲಯ ನಿರ್ದೇಶಕರ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭ
ಮೈಸೂರು: ವನ್ಯಪ್ರಾಣಿಗಳ ವೀಕ್ಷಣೆಗಾಗಿ ಮೃಗಾಲಯಗಳಿಗೆ ಬರುವವರಿಗೆ ಅಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ಮೃಗಾಲಯ ಮತ್ತು ಅಲ್ಲಿನ ಪ್ರಾಣಿ ಸಂರಕ್ಷಣೆ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಸಂಜಯ್ ಕುಮಾರ್ ಶುಕ್ಲಾ ಸಲಹೆ ನೀಡಿದರು.
ಶ್ರೀ ಚಾಮರಾಜೇಂದ್ರ ಮೃಗಾಲಯದ ಸಹಯೋಗದಲ್ಲಿ ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿರುವ ಎರಡು ದಿನಗಳ ಮೃಗಾಲಯ ನಿರ್ದೇಶಕರುಗಳ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಉತ್ತಮವಾಗಿ ಆಯೋಜಿಸಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಎರಡು ದಿನಗಳ ಸಮ್ಮೇಳನದಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆದು, ಅನೇಕ ಸಲಹೆಗಳೂ ಕೇಳಿ ಬಂದಿವೆ. ಆದರೆ, ಸಮ್ಮೇಳನದಲ್ಲಿ ಸಂವಾದಕ್ಕಿಂತ ಗೋಷ್ಠಿಗಳಿಗೆ ಹೆಚ್ಚಿನ ಸಮಯ ಹಿಡಿದಿದೆ. ಸಮ್ಮೇಳನಗಳಲ್ಲಿ ವಿಚಾರಗೋಷ್ಠಿಗಳಿಗಿಂತ ಸಂವಾದ ನಡೆಯುವುದು ಮುಖ್ಯ. ಹೀಗಾಗಿ ಮುಂಬರುವ ದಿನಗಳಲ್ಲಿ ಸಮ್ಮೇಳನವನ್ನು ಮೂರು ದಿನಗಳ ಕಾಲ ಆಯೋಜಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಮಾತನಾಡಿ, ಯುವಪೀಳಿಗೆಗೆ ವನ್ಯಜೀವಿಗಳ ಬಗ್ಗೆ ತಿಳಿಸುವ ಕೆಲಸವಾಗಬೇಕಿದೆ. ಜತೆಗೆ ವನ್ಯಜೀವಿಗಳ ಮನಸ್ಥಿತಿ ಮತ್ತು ಪ್ರೀತಿಸುವ ಬಗ್ಗೆ ಅರಿವು ಮೂಡಿಸಬೇಕಿದೆ. ಸಿಎಸ್ಆರ್ ನಿಧಿ ಮತ್ತು ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ಮೈಸೂರಿನ ಚಾಮರಾಜೇಂದ್ರ ಮೃಗಾಲ ಯದಲ್ಲಿ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಹೊಸ ಮೃಗಾಲಯ ಆರಂಭಗೊಂಡಿದೆ ಎಂದು ತಿಳಿಸಿದರು.
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಪ್ರಾಧಿಕಾರದ ಸದಸ್ಯರಾದ ಗೋಕುಲ್ ಗೋವರ್ಧನ್, ಜ್ಯೋತಿ ರೇಚಣ್ಣ, ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…