ಜಿಲ್ಲೆಗಳು

ವೀಕ್ಷಕರಿಗೆ ಪ್ರಾದೇಶಿಕ ಭಾಷೆಯಲ್ಲಿ ಮಾಹಿತಿ ನೀಡಿ : ಸಂಜಯ್‌ ಕುಮಾರ್‌ ಶುಕ್ಲಾ

ಮೃಗಾಲಯ ನಿರ್ದೇಶಕರ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭ

ಮೈಸೂರು: ವನ್ಯಪ್ರಾಣಿಗಳ ವೀಕ್ಷಣೆಗಾಗಿ ಮೃಗಾಲಯಗಳಿಗೆ ಬರುವವರಿಗೆ ಅಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ಮೃಗಾಲಯ ಮತ್ತು ಅಲ್ಲಿನ ಪ್ರಾಣಿ ಸಂರಕ್ಷಣೆ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಸಂಜಯ್ ಕುಮಾರ್ ಶುಕ್ಲಾ ಸಲಹೆ ನೀಡಿದರು.
ಶ್ರೀ ಚಾಮರಾಜೇಂದ್ರ ಮೃಗಾಲಯದ ಸಹಯೋಗದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿರುವ ಎರಡು ದಿನಗಳ ಮೃಗಾಲಯ ನಿರ್ದೇಶಕರುಗಳ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಉತ್ತಮವಾಗಿ ಆಯೋಜಿಸಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಎರಡು ದಿನಗಳ ಸಮ್ಮೇಳನದಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆದು, ಅನೇಕ ಸಲಹೆಗಳೂ ಕೇಳಿ ಬಂದಿವೆ. ಆದರೆ, ಸಮ್ಮೇಳನದಲ್ಲಿ ಸಂವಾದಕ್ಕಿಂತ ಗೋಷ್ಠಿಗಳಿಗೆ ಹೆಚ್ಚಿನ ಸಮಯ ಹಿಡಿದಿದೆ. ಸಮ್ಮೇಳನಗಳಲ್ಲಿ ವಿಚಾರಗೋಷ್ಠಿಗಳಿಗಿಂತ ಸಂವಾದ ನಡೆಯುವುದು ಮುಖ್ಯ. ಹೀಗಾಗಿ ಮುಂಬರುವ ದಿನಗಳಲ್ಲಿ ಸಮ್ಮೇಳನವನ್ನು ಮೂರು ದಿನಗಳ ಕಾಲ ಆಯೋಜಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಮಾತನಾಡಿ, ಯುವಪೀಳಿಗೆಗೆ ವನ್ಯಜೀವಿಗಳ ಬಗ್ಗೆ ತಿಳಿಸುವ ಕೆಲಸವಾಗಬೇಕಿದೆ. ಜತೆಗೆ ವನ್ಯಜೀವಿಗಳ ಮನಸ್ಥಿತಿ ಮತ್ತು ಪ್ರೀತಿಸುವ ಬಗ್ಗೆ ಅರಿವು ಮೂಡಿಸಬೇಕಿದೆ. ಸಿಎಸ್‌ಆರ್ ನಿಧಿ ಮತ್ತು ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ಮೈಸೂರಿನ ಚಾಮರಾಜೇಂದ್ರ ಮೃಗಾಲ ಯದಲ್ಲಿ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಹೊಸ ಮೃಗಾಲಯ ಆರಂಭಗೊಂಡಿದೆ ಎಂದು ತಿಳಿಸಿದರು.
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಪ್ರಾಧಿಕಾರದ ಸದಸ್ಯರಾದ ಗೋಕುಲ್ ಗೋವರ್ಧನ್, ಜ್ಯೋತಿ ರೇಚಣ್ಣ, ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago