ಮೃಗಾಲಯ ನಿರ್ದೇಶಕರ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭ
ಮೈಸೂರು: ವನ್ಯಪ್ರಾಣಿಗಳ ವೀಕ್ಷಣೆಗಾಗಿ ಮೃಗಾಲಯಗಳಿಗೆ ಬರುವವರಿಗೆ ಅಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ಮೃಗಾಲಯ ಮತ್ತು ಅಲ್ಲಿನ ಪ್ರಾಣಿ ಸಂರಕ್ಷಣೆ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಸಂಜಯ್ ಕುಮಾರ್ ಶುಕ್ಲಾ ಸಲಹೆ ನೀಡಿದರು.
ಶ್ರೀ ಚಾಮರಾಜೇಂದ್ರ ಮೃಗಾಲಯದ ಸಹಯೋಗದಲ್ಲಿ ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿರುವ ಎರಡು ದಿನಗಳ ಮೃಗಾಲಯ ನಿರ್ದೇಶಕರುಗಳ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಉತ್ತಮವಾಗಿ ಆಯೋಜಿಸಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಎರಡು ದಿನಗಳ ಸಮ್ಮೇಳನದಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆದು, ಅನೇಕ ಸಲಹೆಗಳೂ ಕೇಳಿ ಬಂದಿವೆ. ಆದರೆ, ಸಮ್ಮೇಳನದಲ್ಲಿ ಸಂವಾದಕ್ಕಿಂತ ಗೋಷ್ಠಿಗಳಿಗೆ ಹೆಚ್ಚಿನ ಸಮಯ ಹಿಡಿದಿದೆ. ಸಮ್ಮೇಳನಗಳಲ್ಲಿ ವಿಚಾರಗೋಷ್ಠಿಗಳಿಗಿಂತ ಸಂವಾದ ನಡೆಯುವುದು ಮುಖ್ಯ. ಹೀಗಾಗಿ ಮುಂಬರುವ ದಿನಗಳಲ್ಲಿ ಸಮ್ಮೇಳನವನ್ನು ಮೂರು ದಿನಗಳ ಕಾಲ ಆಯೋಜಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಮಾತನಾಡಿ, ಯುವಪೀಳಿಗೆಗೆ ವನ್ಯಜೀವಿಗಳ ಬಗ್ಗೆ ತಿಳಿಸುವ ಕೆಲಸವಾಗಬೇಕಿದೆ. ಜತೆಗೆ ವನ್ಯಜೀವಿಗಳ ಮನಸ್ಥಿತಿ ಮತ್ತು ಪ್ರೀತಿಸುವ ಬಗ್ಗೆ ಅರಿವು ಮೂಡಿಸಬೇಕಿದೆ. ಸಿಎಸ್ಆರ್ ನಿಧಿ ಮತ್ತು ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ಮೈಸೂರಿನ ಚಾಮರಾಜೇಂದ್ರ ಮೃಗಾಲ ಯದಲ್ಲಿ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಹೊಸ ಮೃಗಾಲಯ ಆರಂಭಗೊಂಡಿದೆ ಎಂದು ತಿಳಿಸಿದರು.
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಪ್ರಾಧಿಕಾರದ ಸದಸ್ಯರಾದ ಗೋಕುಲ್ ಗೋವರ್ಧನ್, ಜ್ಯೋತಿ ರೇಚಣ್ಣ, ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…
ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ ಹನೂರು: ಹನೂರು…
ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…