ಜಿಲ್ಲೆಗಳು

ಸುತ್ತೂರು ಜಾತ್ರೆಯಲ್ಲಿ ಸೈಬರ್ ಅಪರಾಧ ಕುರಿತು ಜನ ಜಾಗೃತಿ

-ಶ್ರೀಧರ್ ಆರ್.ಭಟ್

ನಂಜನಗೂಡು: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವಂಚಕರು, ಅಮಾಯಕರನ್ನು ವಂಚಿಸುವ ವಿವಿಧ ಬಗೆಯ ಸೈಬರ್ ಅಪರಾಧ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸುತ್ತೂರು ಶ್ರೀಗಳ ಪ್ರಯತ್ನ ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಜನಾಕರ್ಷಣೆಯ ಕೇಂದ್ರವಾಗಿದೆ.
ಇಂದಿನ ಸಮಾಜದಲ್ಲಿ ಅಮಾಯಕರು ಸೈಬರ್ ತಂತ್ರಜ್ಞಾನದ ಮೋಸದ ಜಾಲಕ್ಕೆ ಸಿಲುಕಿ ಹಣ ಮಾತ್ರವಲ್ಲದೇ, ಗೌರವಕ್ಕೆ ದಕ್ಕೆ ತಂದುಕೊಳ್ಳುತ್ತಿರುವುದನ್ನು ಅರಿತ ಶ್ರೀಗಳು, ಈ ಅಪರಾಧ ಕುರಿತಂತೆ ಜನ ಜಾಗೃತಿ ಮೂಡಿಸಲು ಈ ವರ್ಷದ ಜಾತ್ರಾ ಮಹೋತ್ಸವದಲ್ಲಿ ಸೈಬರ್ ಜಾಗೃತಿ ಮಳಿಗೆ ತೆರೆಯಲು ಸೂಚಿಸಿದ ಹಿನ್ನೆಲೆಯಲ್ಲಿ ವಸ್ತು ಪ್ರದರ್ಶನದಲ್ಲಿ ಮಳಿಗೆ ತೆರೆಯಲಾಗಿದೆ.
ಜೆಎಸ್‌ಎಸ್ ವಿಜ್ಞಾನ ತಾಂತ್ರಿಕ ಕಾಲೇಜು, ಜಿಲ್ಲಾ ಸೈಬರ್ ಪೊಲೀಸ್ ಹಾಗೂ ನಂಜನಗೂಡು ಪೊಲೀಸ್ ವಿಭಾಗದ ನೇತೃತ್ವದಲ್ಲಿ ಜಾತ್ರೋತ್ಸವದ ವಸ್ತು ಪ್ರದರ್ಶನದಲ್ಲಿ ಮಳಿಗೆಯನ್ನು ತೆರೆಯಲಾಗಿದ್ದು, ಆಧುನಿಕ ತಂತ್ರಜ್ಞಾನ ಹಾಗೂ ಸಮಾಜದ ಅವಿಭಾಜ್ಯ ಅಂಗಗಳಾದ ಮೊಬೈಲ್, ಲ್ಯಾಪ್‌ಟಾಪ್, ಫೇಸ್‌ಬುಕ್, ವಾಟ್ಸ್ ಆ್ಯಪ್‌ಗಳನ್ನು ಬಳಸಿಕೊಂಡು ಡಿಜಿಟಲ್‌ನಲ್ಲಿ ಜನರನ್ನು ಹೇಗೆ ವಂಚಿಸಲಾಗುತ್ತಿದೆ ಎಂಬ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಯನ್ನು ತೋರಿಸಿ ಸೈಬರ್ ವಂಚನೆಯಿಂದ ಜನರನ್ನು ಪಾರುಮಾಡುವಯತ್ನ ಇಲ್ಲಿ ನಡೆಯುತ್ತಿದೆ.

ವಿವಿಧ ಆ್ಯಪ್‌ಗಳನ್ನು ಬಳಸಿಕೊಂಡು ಜನತೆಯ ವೈಯೋಕ್ತಿಕ ಮಾಹಿತಿಯನ್ನು ಕದ್ದು ಅದನ್ನು ಬೇರೆಯವರಿಗೆ ಮಾರಾಟ ಮಾಡುವ ಬಗೆಯನ್ನು ಇಲ್ಲಿ ವಿವರಿಸಲಾಗುತ್ತಿದೆ
ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಪ್ರಮುಖರಾದ ಡಾ.ಅನಿಲ್‌ಕುಮಾರ್, ವಿದ್ಯಾರ್ಥಿಗಳಾದ ಕಾರ್ತಿಕ, ತಾನಿಯಾ, ಚಂದನ್ ಎಂಬುವರು ಜಾತ್ರೆಗೆ ಬರುವ ಜನತೆಗೆ ಸೈಬರ್ ಮೋಸದ ಕುರಿತು ಪ್ರಾತ್ಯಕ್ಷಿಕೆ ಸಹಿತ ವಿವರಗಳನ್ನು ನೀಡುತ್ತಿದ್ದರೆ, ಜಿಲ್ಲಾ ಸೈಬರ್ ಠಾಣಾಧಿಕಾರಿ ಶಬೀರ್ ಹುಸೇನ್, ಸಿಂಧು ಹಾಗೂ ನಂಜನಗೂಡು ಪೊಲೀಸ್ ಠಾಣೆಯ ಲೋಕೇಶ ಎಂಬವರು ಸೈಬರ್ ಅಪರಾಧಗಳು, ಶಿಕ್ಷೆ ಪ್ರಮಾಣ ಹಾಗೂ ಅದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನತೆಗೆ ಅರಿವಿನ ಪಾಠ ಮಾಡುತ್ತ ಆನ್‌ಲೈನ್‌ನಲ್ಲಿ ಹಣದ ವಹಿವಾಟುದಾರರೇ ನೀವೆಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು ಎಂಬ ತಿಳಿವಳಿಕೆಯನ್ನು ಮೂಡಿಸುತ್ತಿದ್ದಾರೆ.

ಸೈಬರ್ ಕ್ರೈಂ ಜಾಲಕ್ಕೆ ಸಿಲುಕಿದವರೇ ಇಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿ ತಾವೂ ಮೋಸಕ್ಕೊಳಗಾದ ಬಗೆಯನ್ನು ವಿವರಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ. ವಿಧ ವಿಧವಾದ ಉಡುಗೊರೆಗಳ ಆಮಿಷಕ್ಕೆ ಬಲಿಯಾಗಿ ನಿಮ್ಮ ಮಾಹಿತಿಯನ್ನು ನೀಡಬೇಡಿ ಎಂಬ ಎಚ್ಚರಿಕೆಯ ಪಾಠ ಇಲ್ಲಿ ಬಂದವರಿಗೆಲ್ಲ ಹೇಳುತ್ತಿದ್ದಾರೆ.


ಇಲಾಖೆ ಒಳಗಿನವರು ಹೊರಗಿನವರ ಜೊತೆ ಕೈಜೋಡಿಸಿದರೆ ಮಾತ್ರ ಸೈಬರ್ ಅಪರಾಧ ಎಡೆ ಮಾಡಿಕೊಡಲು ಸಾಧ್ಯ

-ಡಾ ಅನಿಲ್ ಕುಮಾರ್.


ನಾನು ಯಾರಿಗೂ ಮಾಹಿತಿಯನ್ನೇ ನೀಡಿಲ್ಲ. ಆದರೂ ನನ್ನ ಖಾತೆಯಿಂದ 30 ಸಾವಿರ ರೂ. ದೋಚಲಾಗಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.

– ನಂಜುಂಡಸ್ವಾಮಿ, ಕೊಳ್ಳೇಗಾಲ.


ಸೈಬರ್ ಠಾಣೆಯಲ್ಲಿ ಸಾವಿರಾರು ರೂ.ಗಳಿಗೆ ಮಾನ್ಯತೆೆಯೇ ಇಲ್ಲ. ಲಕ್ಷದ ಮೇಲೆ ಹಣ ಕಳೆದುಕೊಂಡರೆ ಮಾತ್ರ ದೂರು ನೀಡಿ, ಕಡಿಮೆ ಹಣದ ವಂಚನೆಗೆ ಒಳಗಾಗಿದ್ದರೆ ಹಣ ಸಿಗಲಾರದು, ಅಲೆದಾಟ ತಪ್ಪದು.

– ಗೋಪಾಲ, ಪಿರಿಯಾಪಟ್ಟಣ.

andolanait

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

9 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

12 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

13 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

13 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

13 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

13 hours ago