ಜಿಲ್ಲೆಗಳು

ಸುತ್ತೂರು ಜಾತ್ರೆಯಲ್ಲಿ ಸೈಬರ್ ಅಪರಾಧ ಕುರಿತು ಜನ ಜಾಗೃತಿ

-ಶ್ರೀಧರ್ ಆರ್.ಭಟ್

ನಂಜನಗೂಡು: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವಂಚಕರು, ಅಮಾಯಕರನ್ನು ವಂಚಿಸುವ ವಿವಿಧ ಬಗೆಯ ಸೈಬರ್ ಅಪರಾಧ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸುತ್ತೂರು ಶ್ರೀಗಳ ಪ್ರಯತ್ನ ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಜನಾಕರ್ಷಣೆಯ ಕೇಂದ್ರವಾಗಿದೆ.
ಇಂದಿನ ಸಮಾಜದಲ್ಲಿ ಅಮಾಯಕರು ಸೈಬರ್ ತಂತ್ರಜ್ಞಾನದ ಮೋಸದ ಜಾಲಕ್ಕೆ ಸಿಲುಕಿ ಹಣ ಮಾತ್ರವಲ್ಲದೇ, ಗೌರವಕ್ಕೆ ದಕ್ಕೆ ತಂದುಕೊಳ್ಳುತ್ತಿರುವುದನ್ನು ಅರಿತ ಶ್ರೀಗಳು, ಈ ಅಪರಾಧ ಕುರಿತಂತೆ ಜನ ಜಾಗೃತಿ ಮೂಡಿಸಲು ಈ ವರ್ಷದ ಜಾತ್ರಾ ಮಹೋತ್ಸವದಲ್ಲಿ ಸೈಬರ್ ಜಾಗೃತಿ ಮಳಿಗೆ ತೆರೆಯಲು ಸೂಚಿಸಿದ ಹಿನ್ನೆಲೆಯಲ್ಲಿ ವಸ್ತು ಪ್ರದರ್ಶನದಲ್ಲಿ ಮಳಿಗೆ ತೆರೆಯಲಾಗಿದೆ.
ಜೆಎಸ್‌ಎಸ್ ವಿಜ್ಞಾನ ತಾಂತ್ರಿಕ ಕಾಲೇಜು, ಜಿಲ್ಲಾ ಸೈಬರ್ ಪೊಲೀಸ್ ಹಾಗೂ ನಂಜನಗೂಡು ಪೊಲೀಸ್ ವಿಭಾಗದ ನೇತೃತ್ವದಲ್ಲಿ ಜಾತ್ರೋತ್ಸವದ ವಸ್ತು ಪ್ರದರ್ಶನದಲ್ಲಿ ಮಳಿಗೆಯನ್ನು ತೆರೆಯಲಾಗಿದ್ದು, ಆಧುನಿಕ ತಂತ್ರಜ್ಞಾನ ಹಾಗೂ ಸಮಾಜದ ಅವಿಭಾಜ್ಯ ಅಂಗಗಳಾದ ಮೊಬೈಲ್, ಲ್ಯಾಪ್‌ಟಾಪ್, ಫೇಸ್‌ಬುಕ್, ವಾಟ್ಸ್ ಆ್ಯಪ್‌ಗಳನ್ನು ಬಳಸಿಕೊಂಡು ಡಿಜಿಟಲ್‌ನಲ್ಲಿ ಜನರನ್ನು ಹೇಗೆ ವಂಚಿಸಲಾಗುತ್ತಿದೆ ಎಂಬ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಯನ್ನು ತೋರಿಸಿ ಸೈಬರ್ ವಂಚನೆಯಿಂದ ಜನರನ್ನು ಪಾರುಮಾಡುವಯತ್ನ ಇಲ್ಲಿ ನಡೆಯುತ್ತಿದೆ.

ವಿವಿಧ ಆ್ಯಪ್‌ಗಳನ್ನು ಬಳಸಿಕೊಂಡು ಜನತೆಯ ವೈಯೋಕ್ತಿಕ ಮಾಹಿತಿಯನ್ನು ಕದ್ದು ಅದನ್ನು ಬೇರೆಯವರಿಗೆ ಮಾರಾಟ ಮಾಡುವ ಬಗೆಯನ್ನು ಇಲ್ಲಿ ವಿವರಿಸಲಾಗುತ್ತಿದೆ
ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಪ್ರಮುಖರಾದ ಡಾ.ಅನಿಲ್‌ಕುಮಾರ್, ವಿದ್ಯಾರ್ಥಿಗಳಾದ ಕಾರ್ತಿಕ, ತಾನಿಯಾ, ಚಂದನ್ ಎಂಬುವರು ಜಾತ್ರೆಗೆ ಬರುವ ಜನತೆಗೆ ಸೈಬರ್ ಮೋಸದ ಕುರಿತು ಪ್ರಾತ್ಯಕ್ಷಿಕೆ ಸಹಿತ ವಿವರಗಳನ್ನು ನೀಡುತ್ತಿದ್ದರೆ, ಜಿಲ್ಲಾ ಸೈಬರ್ ಠಾಣಾಧಿಕಾರಿ ಶಬೀರ್ ಹುಸೇನ್, ಸಿಂಧು ಹಾಗೂ ನಂಜನಗೂಡು ಪೊಲೀಸ್ ಠಾಣೆಯ ಲೋಕೇಶ ಎಂಬವರು ಸೈಬರ್ ಅಪರಾಧಗಳು, ಶಿಕ್ಷೆ ಪ್ರಮಾಣ ಹಾಗೂ ಅದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನತೆಗೆ ಅರಿವಿನ ಪಾಠ ಮಾಡುತ್ತ ಆನ್‌ಲೈನ್‌ನಲ್ಲಿ ಹಣದ ವಹಿವಾಟುದಾರರೇ ನೀವೆಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು ಎಂಬ ತಿಳಿವಳಿಕೆಯನ್ನು ಮೂಡಿಸುತ್ತಿದ್ದಾರೆ.

ಸೈಬರ್ ಕ್ರೈಂ ಜಾಲಕ್ಕೆ ಸಿಲುಕಿದವರೇ ಇಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿ ತಾವೂ ಮೋಸಕ್ಕೊಳಗಾದ ಬಗೆಯನ್ನು ವಿವರಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ. ವಿಧ ವಿಧವಾದ ಉಡುಗೊರೆಗಳ ಆಮಿಷಕ್ಕೆ ಬಲಿಯಾಗಿ ನಿಮ್ಮ ಮಾಹಿತಿಯನ್ನು ನೀಡಬೇಡಿ ಎಂಬ ಎಚ್ಚರಿಕೆಯ ಪಾಠ ಇಲ್ಲಿ ಬಂದವರಿಗೆಲ್ಲ ಹೇಳುತ್ತಿದ್ದಾರೆ.


ಇಲಾಖೆ ಒಳಗಿನವರು ಹೊರಗಿನವರ ಜೊತೆ ಕೈಜೋಡಿಸಿದರೆ ಮಾತ್ರ ಸೈಬರ್ ಅಪರಾಧ ಎಡೆ ಮಾಡಿಕೊಡಲು ಸಾಧ್ಯ

-ಡಾ ಅನಿಲ್ ಕುಮಾರ್.


ನಾನು ಯಾರಿಗೂ ಮಾಹಿತಿಯನ್ನೇ ನೀಡಿಲ್ಲ. ಆದರೂ ನನ್ನ ಖಾತೆಯಿಂದ 30 ಸಾವಿರ ರೂ. ದೋಚಲಾಗಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.

– ನಂಜುಂಡಸ್ವಾಮಿ, ಕೊಳ್ಳೇಗಾಲ.


ಸೈಬರ್ ಠಾಣೆಯಲ್ಲಿ ಸಾವಿರಾರು ರೂ.ಗಳಿಗೆ ಮಾನ್ಯತೆೆಯೇ ಇಲ್ಲ. ಲಕ್ಷದ ಮೇಲೆ ಹಣ ಕಳೆದುಕೊಂಡರೆ ಮಾತ್ರ ದೂರು ನೀಡಿ, ಕಡಿಮೆ ಹಣದ ವಂಚನೆಗೆ ಒಳಗಾಗಿದ್ದರೆ ಹಣ ಸಿಗಲಾರದು, ಅಲೆದಾಟ ತಪ್ಪದು.

– ಗೋಪಾಲ, ಪಿರಿಯಾಪಟ್ಟಣ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago