ಜಿಲ್ಲೆಗಳು

ವೀರ ಯೋಧ ಪ್ರಾಂಜಲ್‌ಗೆ ಸಾರ್ವಜನಿಕರ ಅಂತಿಮ ನಮನ

ಬೆಂಗಳೂರು: ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾದ ಮೈಸೂರು ಮೂಲದ ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಸಾರ್ವಜನಿಕರು ನೂರಾಋಉ ಸಂಖ್ಯೆಯಲ್ಲಿ ಆಗಮಿಸಿ ವೀರ ಯೋಧನಿಗೆ ತಮ್ಮ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ನಂದನವನ ಬಡಾವಣೆಯ ಅವರ ನಿವಾಸದ ಬಳಿ ಬೆಳಗ್ಗೆ ೭ರಿಂದ ೧೦ ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ ೧೦.೩೦ಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಾಂಜಲ್‌ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.

೧೧.೩೦ರವರೆಗೆ ಮನೆಯ ಬಳಿ ಎಲ್ಲಾ ವಿಧಿ-ವಿಧಾನಗಳು ಮುಗಿದ ನಂತರ, ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ, ಕಲ್ಲುಬಾಳು ಕ್ರಾಸ್‌, ಜಿಗಣಿ ಒಟಿಐಎಸ್‌ ವೃತ್ತ, ಉಡುಪಿ ಗಾರ್ಡನ್‌ ರಿಂಗ್‌ ರೋಡ್‌, ಪೊಪ್ಪ ಗೇಟ್‌ ಮೂಲಕ ಸಾಗಿ ನೈಸ್‌ ರಸ್ತೆಗೆ ತಲುಪಲಿದೆ. ಬಳಿಕ ಕೂಡ್ಲು ವಿದ್ಯುತ್‌ ಚಿತಾಗಾರಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಸೇನಾ ಗೌರವದ ನಂತರ ಅಂತಿಮ ವಿದಿ-ವಿಧಾನಗಳನ್ನು ನೆರವೇರಿಸಲಾಗುತ್ತದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago