ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ಅ.೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಮತ್ತು ಮಡಿಕೇರಿ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಹೈ ಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ತಿಳಿಸಿದ್ದಾರೆ.
ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಕನ್ನಂಡ ಕವಿತ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಭಾಷಣಕಾರರಾಗಿ ಕಡಗದಾಳು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಉಪಾಧ್ಯಾಯರಾದ ಎಂ.ಜೆ.ಗಂಗಮ್ಮ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ನೇತ್ರದಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಕೃಪಾಲಿನಿ ಅಯ್ಯಪ್ಪ, ರಕ್ತನಿಧಿ ವಿಭಾಗದ ಮೆಡಿಕಲ್ ಆಫಿಸರ್ ಡಾ.ಕೆ.ಪಿ.ಕರುಂಬಯ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಮೊದಲಾದವರು ಉಪಸ್ಥಿತರಿರುವರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…