ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ಅ.೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಮತ್ತು ಮಡಿಕೇರಿ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಹೈ ಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ತಿಳಿಸಿದ್ದಾರೆ.
ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಕನ್ನಂಡ ಕವಿತ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಭಾಷಣಕಾರರಾಗಿ ಕಡಗದಾಳು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಉಪಾಧ್ಯಾಯರಾದ ಎಂ.ಜೆ.ಗಂಗಮ್ಮ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ನೇತ್ರದಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಕೃಪಾಲಿನಿ ಅಯ್ಯಪ್ಪ, ರಕ್ತನಿಧಿ ವಿಭಾಗದ ಮೆಡಿಕಲ್ ಆಫಿಸರ್ ಡಾ.ಕೆ.ಪಿ.ಕರುಂಬಯ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಮೊದಲಾದವರು ಉಪಸ್ಥಿತರಿರುವರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…