ಜಿಲ್ಲೆಗಳು

ಪುನೀತ್ ಹೆಸರಿನಲ್ಲಿ ಭರಚುಕ್ಕಿ ಬಯೋ ಪಾರ್ಕ್?

ಎ.ಎಸ್.ಮಣಿಕಂಠ

*ಆಡಳಿತಾತ್ಮಕ ಅನುಮೋದನೆಯೊಂದೆ ಬಾಕಿ.
*೧೦೦ ಕೋಟಿ ವೆಚ್ಚದಲ್ಲಿ ಸಿದ್ಧವಾಗಲಿದೆ ಉದ್ಯಾನವನ.

ಚಾಮರಾಜನಗರ: ರಾಜ್ಯ ಅರಣ್ಯ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಜೊತೆಗೂಡಿ ನಿರ್ಮಿಸಲಿರುವ ಭರಚುಕ್ಕಿ ಬಯೋ ಡೈವರ್ಸಿಟಿ ಪಾರ್ಕ್ ಗೆ ಪುನೀತ್ ರಾಜ್ ಕುಮಾರ್ ಹೆಸರು ಹಿಡುವ ಕೂಗು ಕೇಳಿ ಬಂದಿದ್ದು, ಆದಷ್ಟು ಬೇಗ ಆಡಳಿತ ಅನುಮೋದನೆ ದೊರೆಯಬೇಕಿದೆ.

ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ದೃಷ್ಟಿಯಿಂದ ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌ ನಿರ್ಮಾಣಕ್ಕೆ ಮುಂದಾಗಿರುವುದೆ. ಸುಮಾರು ೨೫ ವಿಭಾಗಗಳನ್ನು ಒಳಗೊಂಡಿರುವ ಈ ಉದ್ಯಾನವನ್ನು ಡಾ.ಪುನೀತ್ ರಾಜ್ ಕುಮಾರ್ ಹೆಸರಿನಲ್ಲೇ ಪ್ರಾರಂಭಿಸಬೇಕು ಹಾಗೂ ಕೂಡಲೇ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಖಾಸಗಿ ಸಮಾರಂಭ ಒಂದರಲ್ಲಿ ಒತ್ತಾಯಿಸಿದ್ದರು.

ಅಂದಾಜು ೧೫೦ ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈ ಬಯೋ ಪಾರ್ಕ್ ಗೆ ಸರ್ಕಾರ ೧೦೦ ಕೋಟಿ ಹಣವನ್ನು ವೆಚ್ಚ ಮಾಡಲಿದೆ. ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಸ್ಥಳೀಯ ಪ್ರವಾಸಿಗರ ಗಮನ ಸೆಳೆಯಲು ಇದು ಅತ್ಯಂತ ಉಪಯುಕ್ತವಾಗಿದೆ. ಆದಷ್ಟು ಬೇಗ ಡಾ.ಪುನೀತ್ ರಾಜ್ ಕುಮಾರ್ ಹೆಸರಿನಲ್ಲೇ ಬಯೋ ಪಾರ್ಕ್ ನಿರ್ಮಾಣಕ್ಕೆ ಒತ್ತಡ ತರುತ್ತೇನೆ ಎಂದು ತಿಳಿಸಿದ್ದಾರೆ.

ಅನುಮೋದನೆಯೊಂದೇ ಬಾಕಿ: ಅರಣ್ಯ ಇಲಾಖೆಯ ವನ್ಯ ಜೀವಿ ವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆಗೆ ಕಾಯುತ್ತಲೇ ಇದೆ. ಈ ಉದ್ದೇಶಿತ ಪಾರ್ಕ್‌ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಮೊದಲ ಹಂತದಲ್ಲಿ ಆಕರ್ಷಕ ಹೆಬ್ಬಾಗಿಲು, ಫುಡ್ ಪಾರ್ಕ್ ಹಾಗೂ ಆಂಪಿ ಥಿಯೇಟರ್ ನಿರ್ಮಾಣ ಗೊಳ್ಳಲಿದ್ದು, ಶಿಕ್ಷಣದ ಜೊತೆಗೆ ಸಂತೋಷದಾಯಕ ಪ್ರವಾಸಕ್ಕೆ ಅನುವು ಮಾಡಿಕೊಡುವ ಪಾರ್ಕ್ ನಿರ್ಮಾಣಗೊಳ್ಳಲಿದೆ.

೨೫ ವಿಭಾಗಗಳ ಭವ್ಯ ಉದ್ಯಾನವನ: ಭರಚುಕ್ಕಿ ಬಯೋ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ ಗಾರ್ಡನ್, ಆರ್ಕಿಡ್ ಒಳಗೊಂಡ ವನ, ನಕ್ಷತ್ರ ಆಕಾರದ ಉದ್ಯಾನ, ಬಿದಿರು ವನ, ಅಪರೂಪದ ಸಸ್ಯಗಳ ಟ್ರೀ ಪಾರ್ಕ್, ಸೋಲಿಗರ ಬದುಕು ತೋರುವ ಟ್ರೈಬಲ್ ಪಾರ್ಕ್, ಮ್ಯೂಸಿಯಂ, ವನ್ಯ ಜೀವಿ ಪಾರ್ಕ್‌, ವೆಟ್ ಲ್ಯಾಂಡ್‌ ಪಾರ್ಕ್‌, ಚಿಟ್ಟೆ ಪಾರ್ಕ್‌, ೧.೫ ಕಿ.ಮೀ ಅಂತರದ ಸ್ಕೈವಾಕ್ ಪಥ ಒಳಗೊಂಡಂತೆ ೨೫ ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರಚುಕ್ಕಿ ಜಲಪಾತವನ್ನು ಅಭಿವೃದ್ಧಿ ಪಡಿಸಲಾಗುತ್ತದೆ.

ವಿಧಾನಸಭೆಯಲ್ಲಿ ೨ ಬಾರಿ ಭರಚುಕ್ಕಿ ಬಯೋ ಪಾರ್ಕ್ ನಿರ್ಮಾಣಕ್ಕೆ ಒತ್ತಡ ಮಾಡಿದ್ದೇನೆ. ಕೊಳ್ಳೇಗಾಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಡಾ.ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲೆ ಭರಚುಕ್ಕಿ ಉದ್ಯಾವನ ನಿರ್ಮಾಣವಾಗಬೇಕಿದೆ.

-ಎನ್.ಮಹೇಶ್,
ಶಾಸಕರು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ.

ರಚುಕ್ಕಿ ೩-೪ ತಿಂಗಳು ಮಾತ್ರ ನೀರು ಲಭ್ಯವಿರುತ್ತದೆ ಇನ್ನು ಉಳಿದ ತಿಂಗಳು ಪ್ರವಾಸಿಗರನ್ನು ಸೆಳೆಯಲು ಬಯೋ ಪಾರ್ಕ್ ಅತ್ಯಗತ್ಯ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಿರ್ಮಾಣಗೊಂಡರೆ ಇನ್ನೂ ಸಂತೋಷ. ಆದಷ್ಟು ಬೇಗ ಸರ್ಕಾರ ಅನುಮೋದನೆ ನೀಡಲಿ.

-ಏಲುಕುಂಡಲು. ಹಿಂದಿನ ಅರಣ್ಯಾಧಿಕಾರಿ.

andolanait

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

1 hour ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

5 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

5 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

6 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

6 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

6 hours ago