ಮೈಸೂರು: ಮಹಾನಾಯಕರು, ಮಹಾಪುರುಷರು ಹಾಗೂ ಕಲಾವಿದರಿಗೆ ಸಾವಿಲ್ಲ.
ಅವರು ನಮ್ಮೊಂದಿಗೆ ಸದಾಕಾಲ ಜೀವಂತವಾಗಿ ಇರುತಾರೆ. ಅದೇ ರೀತಿ ಪುನೀತ್ರಾಜ್
ಕುಮಾರ್ ಸಹ ಮರೆಯಲಾಗದ ಮಹಾಪುರುಷರಾಗಿ ಜನಮಾನಸದಲ್ಲಿ
ಅಜರಾಮರರಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಜಯಪುರದಲ್ಲಿ ವಿನಾಯಕ ಗೆಳೆಯರ ಬಳಗ ಹಾಗೂ
ಸಿದ್ದೇಗೌಡರ ಅಭಿಮಾನಿ ಬಳಗದ ವತಿಯಿಂದ ನಡೆದ ಪುನೀತ ಪರ್ವ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದ ಅವರು, ಪುನೀತ್ರಾಜ್ ಕುಮಾರ್ ಅವರ ಅಪ್ಪಟ ಅಭಿವಾನಿ, ರಾಜ್ಕುಮಾರ್ ಅವರ ಬಂಗಾರದ ಮನುಷ್ಯ ಸಿನಿಮಾ ಜನರ ಜೀವನದ ದಿಕ್ಕನ್ನೇ ಬದಲಾಯಿಸಿದೆ. ಪುನೀತ್ರಾಜ್ಕುಮಾರ್ ಅವರು ಸಹ ತಂದೆಯಂತೆ
ಉತ್ತಮ ಕಲಾವಿದರಾಗಿ ಈ ನಾಡಿಗೆ ಸಂದೇಶ ಕೊಡುವಂತಹ ಸಿನಿಮಾಗಳಲ್ಲಿ ಅಭಿನಯಿಸಿ ರಾಜ್ಯ,
ರಾಷ್ಟ್ರ ಪ್ರಶಸ್ತಿ ಗಳಿಸಿ ಎಲೆಮರೆಯ ಕಾಯಿಯಂತೆ ಸಾಮಾಜಿಕ ಸೇವೆ ಮಾಡುತ್ತ ಕಿರಿಯ ವಯಸ್ಸಿನಲ್ಲಿಯೇ
ಅಗಲಿರುವುದು ನಮ್ಮನ್ನು ಕಾಡುತ್ತಿದೆ. ಪುನೀತ್ರಾಜ್ಕುಮಾರ್ ಮತ್ತೊಮ್ಮೆ ಈ
ಭೂಮಿ ಮೇಲೆ ಹುಟ್ಟಿಬರಲಿ ಎಂದರು.
ಸಮಾರಂಭದಲ್ಲಿ ಜಿ.ಪಂ. ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಕೆಂಪನಾಯಕ
ಶ್ರೀರಾಂಪುರ ರಮೇಶ್, ಸೋಮಣ್ಣ, ನಾಗೇಶ್, ನೂರಾರು ಅಭಿಮಾನಿಗಳು
ಹಾಜರಿದ್ದರು.
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…
ಮೂಲ : ಪೂಜ ಹರೀಶ್, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…