ಜಿಲ್ಲೆಗಳು

ಪುನೀತ್‌ ರಾಜ್‌ಕುಮಾರ್‌ ಜನಮಾನಸದಲ್ಲಿ ಅಜರಾಮರರಾಗಿದ್ದಾರೆ : ಸಿ.ಎನ್. ಮಂಜೇಗೌಡ

ಮೈಸೂರು: ಮಹಾನಾಯಕರು, ಮಹಾಪುರುಷರು ಹಾಗೂ ಕಲಾವಿದರಿಗೆ ಸಾವಿಲ್ಲ.
ಅವರು ನಮ್ಮೊಂದಿಗೆ ಸದಾಕಾಲ ಜೀವಂತವಾಗಿ ಇರುತಾರೆ. ಅದೇ ರೀತಿ ಪುನೀತ್‌ರಾಜ್
ಕುಮಾರ್ ಸಹ ಮರೆಯಲಾಗದ ಮಹಾಪುರುಷರಾಗಿ ಜನಮಾನಸದಲ್ಲಿ
ಅಜರಾಮರರಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಜಯಪುರದಲ್ಲಿ ವಿನಾಯಕ ಗೆಳೆಯರ ಬಳಗ ಹಾಗೂ
ಸಿದ್ದೇಗೌಡರ ಅಭಿಮಾನಿ ಬಳಗದ ವತಿಯಿಂದ ನಡೆದ ಪುನೀತ ಪರ್ವ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದ ಅವರು, ಪುನೀತ್‌ರಾಜ್  ಕುಮಾರ್ ಅವರ ಅಪ್ಪಟ ಅಭಿವಾನಿ, ರಾಜ್‌ಕುಮಾರ್ ಅವರ ಬಂಗಾರದ ಮನುಷ್ಯ ಸಿನಿಮಾ ಜನರ ಜೀವನದ ದಿಕ್ಕನ್ನೇ ಬದಲಾಯಿಸಿದೆ. ಪುನೀತ್‌ರಾಜ್‌ಕುಮಾರ್ ಅವರು ಸಹ ತಂದೆಯಂತೆ
ಉತ್ತಮ ಕಲಾವಿದರಾಗಿ ಈ ನಾಡಿಗೆ ಸಂದೇಶ ಕೊಡುವಂತಹ ಸಿನಿಮಾಗಳಲ್ಲಿ ಅಭಿನಯಿಸಿ ರಾಜ್ಯ,
ರಾಷ್ಟ್ರ ಪ್ರಶಸ್ತಿ ಗಳಿಸಿ ಎಲೆಮರೆಯ ಕಾಯಿಯಂತೆ ಸಾಮಾಜಿಕ ಸೇವೆ ಮಾಡುತ್ತ ಕಿರಿಯ ವಯಸ್ಸಿನಲ್ಲಿಯೇ
ಅಗಲಿರುವುದು ನಮ್ಮನ್ನು ಕಾಡುತ್ತಿದೆ. ಪುನೀತ್‌ರಾಜ್‌ಕುಮಾರ್ ಮತ್ತೊಮ್ಮೆ ಈ
ಭೂಮಿ ಮೇಲೆ ಹುಟ್ಟಿಬರಲಿ ಎಂದರು.

ಸಮಾರಂಭದಲ್ಲಿ ಜಿ.ಪಂ. ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಕೆಂಪನಾಯಕ
ಶ್ರೀರಾಂಪುರ ರಮೇಶ್, ಸೋಮಣ್ಣ, ನಾಗೇಶ್, ನೂರಾರು ಅಭಿಮಾನಿಗಳು
ಹಾಜರಿದ್ದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

51 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

1 hour ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

1 hour ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

4 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

4 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

4 hours ago