ಜಿಲ್ಲೆಗಳು

ಪುನೀತ್‌ ರಾಜ್‌ಕುಮಾರ್‌ ಜನಮಾನಸದಲ್ಲಿ ಅಜರಾಮರರಾಗಿದ್ದಾರೆ : ಸಿ.ಎನ್. ಮಂಜೇಗೌಡ

ಮೈಸೂರು: ಮಹಾನಾಯಕರು, ಮಹಾಪುರುಷರು ಹಾಗೂ ಕಲಾವಿದರಿಗೆ ಸಾವಿಲ್ಲ.
ಅವರು ನಮ್ಮೊಂದಿಗೆ ಸದಾಕಾಲ ಜೀವಂತವಾಗಿ ಇರುತಾರೆ. ಅದೇ ರೀತಿ ಪುನೀತ್‌ರಾಜ್
ಕುಮಾರ್ ಸಹ ಮರೆಯಲಾಗದ ಮಹಾಪುರುಷರಾಗಿ ಜನಮಾನಸದಲ್ಲಿ
ಅಜರಾಮರರಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಜಯಪುರದಲ್ಲಿ ವಿನಾಯಕ ಗೆಳೆಯರ ಬಳಗ ಹಾಗೂ
ಸಿದ್ದೇಗೌಡರ ಅಭಿಮಾನಿ ಬಳಗದ ವತಿಯಿಂದ ನಡೆದ ಪುನೀತ ಪರ್ವ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದ ಅವರು, ಪುನೀತ್‌ರಾಜ್  ಕುಮಾರ್ ಅವರ ಅಪ್ಪಟ ಅಭಿವಾನಿ, ರಾಜ್‌ಕುಮಾರ್ ಅವರ ಬಂಗಾರದ ಮನುಷ್ಯ ಸಿನಿಮಾ ಜನರ ಜೀವನದ ದಿಕ್ಕನ್ನೇ ಬದಲಾಯಿಸಿದೆ. ಪುನೀತ್‌ರಾಜ್‌ಕುಮಾರ್ ಅವರು ಸಹ ತಂದೆಯಂತೆ
ಉತ್ತಮ ಕಲಾವಿದರಾಗಿ ಈ ನಾಡಿಗೆ ಸಂದೇಶ ಕೊಡುವಂತಹ ಸಿನಿಮಾಗಳಲ್ಲಿ ಅಭಿನಯಿಸಿ ರಾಜ್ಯ,
ರಾಷ್ಟ್ರ ಪ್ರಶಸ್ತಿ ಗಳಿಸಿ ಎಲೆಮರೆಯ ಕಾಯಿಯಂತೆ ಸಾಮಾಜಿಕ ಸೇವೆ ಮಾಡುತ್ತ ಕಿರಿಯ ವಯಸ್ಸಿನಲ್ಲಿಯೇ
ಅಗಲಿರುವುದು ನಮ್ಮನ್ನು ಕಾಡುತ್ತಿದೆ. ಪುನೀತ್‌ರಾಜ್‌ಕುಮಾರ್ ಮತ್ತೊಮ್ಮೆ ಈ
ಭೂಮಿ ಮೇಲೆ ಹುಟ್ಟಿಬರಲಿ ಎಂದರು.

ಸಮಾರಂಭದಲ್ಲಿ ಜಿ.ಪಂ. ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಕೆಂಪನಾಯಕ
ಶ್ರೀರಾಂಪುರ ರಮೇಶ್, ಸೋಮಣ್ಣ, ನಾಗೇಶ್, ನೂರಾರು ಅಭಿಮಾನಿಗಳು
ಹಾಜರಿದ್ದರು.

andolanait

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

5 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

6 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

7 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

8 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

8 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

10 hours ago