Mysore
25
overcast clouds

Social Media

ಬುಧವಾರ, 13 ಮೇ 2026
Light
Dark

ಪುನೀತ್ ರಾಜ್ ಕುಮಾರ್ ಸೇವೆ ನಮ್ಮೆಲ್ಲರಿಗೂ ಆದರ್ಶನೀಯ- ಎಂ ಆರ್ ಮಂಜುನಾಥ್

ಹನೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸೇವೆ ನಮ್ಮೆಲ್ಲರಿಗೂ ಆದರ್ಶನೀಯವಾದದ್ದು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರು ಅಭಿಪ್ರಾಯಪಟ್ಟರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗನಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಅಪ್ಪು ನಮನ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕುಮಾರ್ ವಂಶಸ್ಥರಿಗೂ ಸಿಂಗನಲ್ಲೂರು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇರುವ ಕಾರಣದಿಂದ ಮತ್ತು ರಾಜಕುಮಾರ್ ತಂದೆಯವರ ಹುಟ್ಟೂರು ಇದಾಗಿರುವುದರಿಂದ ಈ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅತಿ ಚಿಕ್ಕ ವಯಸ್ಸಿನಲ್ಲಿ ಅಪಾರ ಜನ ಸೇವೆ ಮಾಡಿ ಸಾಧನೆ ಮಾಡಿದ ಪುನೀತ್ ರಾಜಕುಮಾರ್ ರವರ ಆದರ್ಶಗಳು ಎಂದೆಂದಿಗೂ ಸ್ಮರಣೀಯವಾದುದು ಎಂದರು.

ಸಂಜೆ ವೇದಿಕೆ ಕಾರ್ಯಕ್ರಮ ಇದ್ದು, ಇಲ್ಲಿನ ಸ್ಥಳೀಯ ಶಾಲಾ ಮಕ್ಕಳಿಂದ ಪುನೀತ್ ಅಭಿನಯದ ಚಿತ್ರದ ಹಾಡುಗಳಿಗೆ ನೃತ್ಯ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಿರು ಕಿರುತೆರೆ ಕಲಾವಿದರಾದ ಗಿಚ್ಚಿ ಗಿಲಿ ಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕ್ಷೇತ್ರದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುನೀತ್ ರವರಿಗೆ ನುಡಿ ನಮನ ಸಲ್ಲಿಸಬೇಕಾಗಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಜೆಡಿಎಸ್ ಮುಖಂಡರಾದ ಮಂಜೇಶ್, ಶಿವಮೂರ್ತಿ, ಬಾಬಣ್ಣ ಮುಂತಾದವರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!