ಜಿಲ್ಲೆಗಳು

ಪುನೀತ್ ರಾಜ್ ಕುಮಾರ್ ಸೇವೆ ನಮ್ಮೆಲ್ಲರಿಗೂ ಆದರ್ಶನೀಯ- ಎಂ ಆರ್ ಮಂಜುನಾಥ್

ಹನೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸೇವೆ ನಮ್ಮೆಲ್ಲರಿಗೂ ಆದರ್ಶನೀಯವಾದದ್ದು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರು ಅಭಿಪ್ರಾಯಪಟ್ಟರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗನಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಅಪ್ಪು ನಮನ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕುಮಾರ್ ವಂಶಸ್ಥರಿಗೂ ಸಿಂಗನಲ್ಲೂರು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇರುವ ಕಾರಣದಿಂದ ಮತ್ತು ರಾಜಕುಮಾರ್ ತಂದೆಯವರ ಹುಟ್ಟೂರು ಇದಾಗಿರುವುದರಿಂದ ಈ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅತಿ ಚಿಕ್ಕ ವಯಸ್ಸಿನಲ್ಲಿ ಅಪಾರ ಜನ ಸೇವೆ ಮಾಡಿ ಸಾಧನೆ ಮಾಡಿದ ಪುನೀತ್ ರಾಜಕುಮಾರ್ ರವರ ಆದರ್ಶಗಳು ಎಂದೆಂದಿಗೂ ಸ್ಮರಣೀಯವಾದುದು ಎಂದರು.

ಸಂಜೆ ವೇದಿಕೆ ಕಾರ್ಯಕ್ರಮ ಇದ್ದು, ಇಲ್ಲಿನ ಸ್ಥಳೀಯ ಶಾಲಾ ಮಕ್ಕಳಿಂದ ಪುನೀತ್ ಅಭಿನಯದ ಚಿತ್ರದ ಹಾಡುಗಳಿಗೆ ನೃತ್ಯ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಿರು ಕಿರುತೆರೆ ಕಲಾವಿದರಾದ ಗಿಚ್ಚಿ ಗಿಲಿ ಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕ್ಷೇತ್ರದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುನೀತ್ ರವರಿಗೆ ನುಡಿ ನಮನ ಸಲ್ಲಿಸಬೇಕಾಗಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಜೆಡಿಎಸ್ ಮುಖಂಡರಾದ ಮಂಜೇಶ್, ಶಿವಮೂರ್ತಿ, ಬಾಬಣ್ಣ ಮುಂತಾದವರು ಹಾಜರಿದ್ದರು.

andolanait

Recent Posts

ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ : ತುರ್ತು ಪರಿಹಾರಕ್ಕೆ ಮನವಿ

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…

2 hours ago

ಮೈಸೂರು | ಪಿಸಿ ಮೇಲೆ ಹಲ್ಲೆ, ಮೊಬೈಲ್‌ ದೋಚಿದ ಖದೀಮರು ; ನಾಲ್ವರ ಬಂಧನ

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…

3 hours ago

ಫಿಟ್‌ ಮೈಸೂರು ವಾಕ್‌ಥಾನ್‌ಗೆ ಮೈಸೂರು ಸಜ್ಜು

 ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…

3 hours ago

ಹಿಮದಿಂದ ಆವೃತವಾದ ಕೇದರನಾಥ

ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…

3 hours ago

ಹುಲಿ ದಾಳಿಗೆ ಹಸು ಬಲಿ : ವ್ಯಾಘ್ರ ಸೆರೆಗೆ ಗ್ರಾಮಸ್ಥರ ಒತ್ತಾಯ

ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…

3 hours ago

ಹಂತ ಹಂತವಾಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ,ಟ್ರಾಮಾ ಸೆಂಟರ್ ಸ್ಥಾಪನೆ : ಸಿಎಂ ಭರವಸೆ

ಹಾವೇರಿ  : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…

3 hours ago