ಜಿಲ್ಲೆಗಳು

ಪುನೀತ್ ರಾಜ್ ಕುಮಾರ್ ಸೇವೆ ನಮ್ಮೆಲ್ಲರಿಗೂ ಆದರ್ಶನೀಯ- ಎಂ ಆರ್ ಮಂಜುನಾಥ್

ಹನೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸೇವೆ ನಮ್ಮೆಲ್ಲರಿಗೂ ಆದರ್ಶನೀಯವಾದದ್ದು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರು ಅಭಿಪ್ರಾಯಪಟ್ಟರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗನಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಅಪ್ಪು ನಮನ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕುಮಾರ್ ವಂಶಸ್ಥರಿಗೂ ಸಿಂಗನಲ್ಲೂರು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇರುವ ಕಾರಣದಿಂದ ಮತ್ತು ರಾಜಕುಮಾರ್ ತಂದೆಯವರ ಹುಟ್ಟೂರು ಇದಾಗಿರುವುದರಿಂದ ಈ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅತಿ ಚಿಕ್ಕ ವಯಸ್ಸಿನಲ್ಲಿ ಅಪಾರ ಜನ ಸೇವೆ ಮಾಡಿ ಸಾಧನೆ ಮಾಡಿದ ಪುನೀತ್ ರಾಜಕುಮಾರ್ ರವರ ಆದರ್ಶಗಳು ಎಂದೆಂದಿಗೂ ಸ್ಮರಣೀಯವಾದುದು ಎಂದರು.

ಸಂಜೆ ವೇದಿಕೆ ಕಾರ್ಯಕ್ರಮ ಇದ್ದು, ಇಲ್ಲಿನ ಸ್ಥಳೀಯ ಶಾಲಾ ಮಕ್ಕಳಿಂದ ಪುನೀತ್ ಅಭಿನಯದ ಚಿತ್ರದ ಹಾಡುಗಳಿಗೆ ನೃತ್ಯ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಿರು ಕಿರುತೆರೆ ಕಲಾವಿದರಾದ ಗಿಚ್ಚಿ ಗಿಲಿ ಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕ್ಷೇತ್ರದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುನೀತ್ ರವರಿಗೆ ನುಡಿ ನಮನ ಸಲ್ಲಿಸಬೇಕಾಗಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಜೆಡಿಎಸ್ ಮುಖಂಡರಾದ ಮಂಜೇಶ್, ಶಿವಮೂರ್ತಿ, ಬಾಬಣ್ಣ ಮುಂತಾದವರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

3 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

3 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

3 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

3 hours ago