ಜಿಲ್ಲೆಗಳು

ಆನೆಗೆ ಕಬ್ಬು ಕೊಟ್ಟು ದಂಡತೆತ್ತ!

ಲಾರಿ ಚಾಲಕನಿಗೆ 75 ಸಾವಿರರೂ. ದಂಡ

ಚಾಮರಾಜನಗರ: ಕಾಡಾನೆಗೆ ಕಬ್ಬು ನೀಡಿದ ಲಾರಿಯ ಚಾಲಕನಿಗೆ ಅರಣ್ಯ ಇಲಾಖೆ 75 ಸಾವಿರ ರೂ. ದಂಡ ಹಾಕಿದೆ!ನಂಜನಗೂಡು ತಾಲ್ಲೂಕಿನ ಸಿದ್ದರಾಜು ದಂಡತೆತ್ತ ಚಾಲಕ ಎಂದು ಗುರುತಿಸಲಾಗಿದೆ.

ಚಾಮರಾಜನಗರ ಗಡಿಗೆ ಸೇರಿದ ತಮಿಳುನಾಡಿನ ಸತ್ಯಮಂಗಲ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ಡಿ. 3ರಂದು ಈ ಪ್ರಕರಣ ನಡೆದಿದೆ.

ಕರೆಪಳ್ಳಂ ಚೆಕ್‌ಪೋಸ್ಟ್‌ ಸನಿಹದ  ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾಡಾನೆಗೆ ನೀಡಲು ಲಾರಿಯಿಂದ ಚಾಲಕ ಕಬ್ಬು ತೆಗೆದುಕೊಂಡು ಹೋಗಿದ್ದು

ಗಸ್ತಿನ ಮೇಲಿದ್ದಅರಣ್ಯ ಇಲಾಖೆ ಸಿಬ್ಬಂದಿಗೆ ಕಂಡು ಬಂದಿತು. ಈಸಂದರ್ಭದಲ್ಲಿ ವಿಚಾರಣೆ ಮಾಡಿದಾಗ ಕಬ್ಬನ್ನು ಆನೆಗೆ ನೀಡಿದ್ದಾಗಿ ಚಾಲಕ ಒಪ್ಪಿಕೊಂಡರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಹಾಸಸೂರು ವನಕೊಟ್ಟಂ ಅರಣ್ಯ ಅಧಿಕಾರಿ ಆದೇಶದಂತೆ ಸಿದ್ದರಾಜು ಅವರಿಂದ 75 ಸಾವಿರ ರೂ. ದಂಡದ ಶುಲ್ಕ ಕಟ್ಟಿಸಿಕೊಂಡು ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಅಲ್ಲಿನ ಅರಣ್ಯ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಕ್ಷಿತಾರಾಣ್ಯಗಳಲ್ಲಿ ವಾಹನಗಳನ್ನು ನಿಲ್ಲಿಸುವುದು ಹಾಗೂ ವನ್ಯಪ್ರಾಣಿಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧವಿದೆ.  ಜಿಲ್ಲೆಯ ಬಿಆರ್ ಟಿಯಲ್ಲಿಯೂ ಪ್ರಾಣಿಗಳಿಗೆ ಆಹಾರ ನೀಡಿದ್ದಕ್ಕೆ ತ್ಯಾಜ್ಯ ಬಿಸಾಡಿದ್ದಕ್ಕೆ ಮತ್ತು ರಕ್ಷಿತಾರಣ್ಯದಲ್ಲಿ ವಾಹನ ನಿಲ್ಲಿಸಿದ್ದಕ್ಕೆ 2ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ಅಲ್ಪ ಪ್ರಮಾಣದಲ್ಲಿ ದಂಡ ಹಾಕಿ ಎಚ್ಚರಿಕೆ ನೀಡಲಾಗಿತ್ತು.

andolana

Recent Posts

ಮನ್‌ರೇಗಾ ಯೋಜನೆ ಬಗ್ಗೆ ಚರ್ಚೆಗೆ ನಾವು ಸಿದ್ಧ: ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು: ಕಾಂಗ್ರೆಸ್‌ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್‌ ಡಿಬೇಟ್‌…

1 hour ago

ಒಡಿಶಾದಲ್ಲಿ ವಿಮಾನ ಪತನ: ಪೈಲಟ್‌ ಸೇರಿ 7 ಪ್ರಯಾಣಿಕರಿಗೆ ಗಾಯ

ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್‌ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ…

1 hour ago

ಮಂಡ್ಯ: ಸರಗಳ್ಳ-ಮನೆಗಳ್ಳನ ಬಂಧನ: 31.98 ಲಕ್ಷ ಮೌಲ್ಯದ ಮಾಲುಗಳ ವಶ

ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ…

1 hour ago

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ, ಪದ್ಮನಾಭನಗರದಲ್ಲಿ: ಮಾಜಿ ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ

ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

2 hours ago

ಗೃಹಲಕ್ಷ್ಮೀ ಸಹಕಾರ ಸಂಘ ಸೇರುವ ಮಹಿಳೆಯರಿಗೆ ಸಾಲ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ…

2 hours ago

ಹನೂರು| ಲೊಕ್ಕನಹಳ್ಳಿ ಗ್ರಾಮದಲ್ಲಿ ನಿರಂತರ ಕಾಡಾನೆ ದಾಳಿ

ಮಹಾದೇಶ್‌ ಎಂ ಗೌಡ  ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು…

3 hours ago