ಚಾಮರಾಜನಗರ: ಕಾಡಾನೆಗೆ ಕಬ್ಬು ನೀಡಿದ ಲಾರಿಯ ಚಾಲಕನಿಗೆ ಅರಣ್ಯ ಇಲಾಖೆ 75 ಸಾವಿರ ರೂ. ದಂಡ ಹಾಕಿದೆ!ನಂಜನಗೂಡು ತಾಲ್ಲೂಕಿನ ಸಿದ್ದರಾಜು ದಂಡತೆತ್ತ ಚಾಲಕ ಎಂದು ಗುರುತಿಸಲಾಗಿದೆ.
ಚಾಮರಾಜನಗರ ಗಡಿಗೆ ಸೇರಿದ ತಮಿಳುನಾಡಿನ ಸತ್ಯಮಂಗಲ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ಡಿ. 3ರಂದು ಈ ಪ್ರಕರಣ ನಡೆದಿದೆ.
ಕರೆಪಳ್ಳಂ ಚೆಕ್ಪೋಸ್ಟ್ ಸನಿಹದ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾಡಾನೆಗೆ ನೀಡಲು ಲಾರಿಯಿಂದ ಚಾಲಕ ಕಬ್ಬು ತೆಗೆದುಕೊಂಡು ಹೋಗಿದ್ದು
ಗಸ್ತಿನ ಮೇಲಿದ್ದಅರಣ್ಯ ಇಲಾಖೆ ಸಿಬ್ಬಂದಿಗೆ ಕಂಡು ಬಂದಿತು. ಈಸಂದರ್ಭದಲ್ಲಿ ವಿಚಾರಣೆ ಮಾಡಿದಾಗ ಕಬ್ಬನ್ನು ಆನೆಗೆ ನೀಡಿದ್ದಾಗಿ ಚಾಲಕ ಒಪ್ಪಿಕೊಂಡರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಹಾಸಸೂರು ವನಕೊಟ್ಟಂ ಅರಣ್ಯ ಅಧಿಕಾರಿ ಆದೇಶದಂತೆ ಸಿದ್ದರಾಜು ಅವರಿಂದ 75 ಸಾವಿರ ರೂ. ದಂಡದ ಶುಲ್ಕ ಕಟ್ಟಿಸಿಕೊಂಡು ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಅಲ್ಲಿನ ಅರಣ್ಯ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಕ್ಷಿತಾರಾಣ್ಯಗಳಲ್ಲಿ ವಾಹನಗಳನ್ನು ನಿಲ್ಲಿಸುವುದು ಹಾಗೂ ವನ್ಯಪ್ರಾಣಿಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧವಿದೆ. ಜಿಲ್ಲೆಯ ಬಿಆರ್ ಟಿಯಲ್ಲಿಯೂ ಪ್ರಾಣಿಗಳಿಗೆ ಆಹಾರ ನೀಡಿದ್ದಕ್ಕೆ ತ್ಯಾಜ್ಯ ಬಿಸಾಡಿದ್ದಕ್ಕೆ ಮತ್ತು ರಕ್ಷಿತಾರಣ್ಯದಲ್ಲಿ ವಾಹನ ನಿಲ್ಲಿಸಿದ್ದಕ್ಕೆ 2ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ಅಲ್ಪ ಪ್ರಮಾಣದಲ್ಲಿ ದಂಡ ಹಾಕಿ ಎಚ್ಚರಿಕೆ ನೀಡಲಾಗಿತ್ತು.
ಜಿ.ಎಲ್.ತ್ರಿಪುರಾಂತಕ ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು…
ಕೆ.ಬಿ.ರಮೇಶನಾಯಕ ‘ಒಟ್ಟಾಗಿ ಕೈಜೋಡಿಸಿ ಶುಚಿಗೊಳಿಸಿ’ ಎಂಬ ಘೋಷವಾಕ್ಯದೊಂದಿಗೆ ಸರ್ವೇಕ್ಷಣೆ ಮೈಸೂರು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ…
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…