ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿ ವರ್ಷ ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಅಪ್ಪು ಅವರನ್ನು ಜೀವಂತವಾಗಿರಿಸಿದೆ. ಅಪ್ಪು ನಡೆದ ಹಾದಿಯಲ್ಲೆ ನಡೆಯುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಅಪ್ಪು ನೆನೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಮೂರು ದಿನಗಳ ಪುನೀತೋತ್ಸವ ಆಚರಿಸಲಾಗುತ್ತಿದ್ದು, ಅಪ್ಪು ನೆನಪಲ್ಲಿ ವಿಶೇಷ ಕಾರ್ಯಕ್ರಮಗಳನ್ನ ನಡೆಸಲಾಗುತ್ತಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಕ್ರೀಡಾಂಗಣದಲ್ಲಿ ನವೆಂಬರ್ 25, 26, 27 ಮೂರು ದಿನಗಳ ಕಾಲ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಪುನೀತೋತ್ಸವ ಕಾರ್ಯಕ್ರಮ ನಡೆಯಲಿದೆ. ಮೇಲುಕೋಟೆ ಶಾಸಕ ಪುಟ್ಟರಾಜು ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದಾರೆ. ಡಾ. ರಾಜ್ ಕುಟುಂಬದ ಮಾರ್ಗದರ್ಶನದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಮೂರು ದಿನಗಳ ಕಾಲ ಪಾಂಡವಪುರ ಜನತೆಗೆ ಭರಪೂರ ಮನರಂಜನೆ ಸಿಗಲಿದೆ.
ಈ ಕಾರ್ಯಕ್ರಮಕ್ಕೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್ ಸೇರಿದಂತೆ ರಾಜ್ ಕುಟುಂಬದ ಬಹುತೇಕ ಸದಸ್ಯರು ಭಾಗಿಯಾಗಲಿದ್ದಾರೆ. ಇದಲ್ಲದೇ ಸ್ಯಾಂಡಲ್ವುಡ್ನ ಖ್ಯಾತ ನಟ-ನಟಿಯರು ಆಗಮಿಸುತ್ತಿದ್ದು ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಜೊತೆಗೆ ಖ್ಯಾತ ಗಾಯಕರಾದ (Singers) ವಿಜಯ ಪ್ರಕಾಶ್, ಅನನ್ಯ ಭಟ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂರು ದಿನಗಳ ಕಾಲ ಮ್ಯೂಸಿಕಲ್ ನೈಟ್ (ಸಂಗೀತ ರಾತ್ರಿ) ನಡೆಸಿಕೊಡಲಿದ್ದಾರೆ.
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…
ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್…
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ…
ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ…
ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…